ಯಶವಂತಪುರದಲ್ಲಿ ಸ್ವಾತಂತ್ರ್ಯ ಆಚರಣೆ: ಧ್ವಜಾರೋಹಣ ನೆರವೇರಿಸಿದ ಪಾಲಿಕೆ ಸದಸ್ಯ ವೆಂಕಟೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ಯಶವಂತಪುರ ಜಂಕ್ಷನ್ ಬಳಿ ನಡೆದ ಸ್ವಾತಂತ್ರ್ಯ ಆಚರಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯ ಜಿ. ಕೆ. ವೆಂಕಟೇಶ್ ಅವರು ಧ್ವಜಾರೋಹಣ ನೆರವೇರಿಸಿದರು.
ಬೆಳಿಗ್ಗೆ ಸಾಮಾಜಿಕ ಕಾರ್ಯಕರ್ತೆ ಸುಮಾ ಅವರು ಧ್ವಜಸ್ತಂಭ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಧ್ವಜಾರೋಹಣ ಸಂದರ್ಭ ರಾಷ್ಟ್ರಗೀತೆ ಹಾಡುವ ಮೂಲಕ ಪಾಲಿಕೆ ಸದಸ್ಯರು ಮತ್ತು ಊರಿನ ಹಿರಿಯರು ಮಹಿಳೆಯರು ಹಾಗೂ ಗಣ್ಯರು ಸಾಥ್ ನೀಡಿದರು. ಸಿಹಿ ಹಂಚಿ ಸಂಭ್ರಮಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!