ಹೊಸದಿಗಂತ ವರದಿ ವಿಜಯಪುರ:
ಸಚಿವ ಸ್ಥಾನ ಲಭಿಸದ ಹಿನ್ನೆಲೆ ತೀವ್ರ ಆಕ್ರೋಶಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ, ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವ ಸರ್ಕಾರದ ಎರಡನೇ ಅವಧಿಯ ಸಚಿವ ಸಂಪುದಲ್ಲಿ ತಮಗೆ ಸಚಿವ ಸ್ಥಾನ ಲಭಿಸುತ್ತದೆ ಎನ್ನುವ ನಿಟ್ಟಿನಲ್ಲಿ ಬಹು ನಿರೀಕ್ಷೆಯಲ್ಲಿದ್ದ ಶಾಸಕ ಯಶವಂತರಾಯಗೌಡ ಪಾಟೀಲರ ಹೆಸರು ಕೊನೆ ಕ್ಷಣದಲ್ಲಿ ಕೈ ತಪ್ಪಿತ್ತು. ಇದರಿಂದ ಆಕ್ರೋಶಗೊಂಡು ಸಭಾಧ್ಯಕ್ಷರಿಗೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ:
ಇಂದು ಇಂಡಿಯಲ್ಲಿ ತಮ್ಮ ಕಾರ್ಯಕರ್ತರು, ಅಭಿಮಾನಿ, ಹಿತೈಷಿಗಳ ಸಭೆಯಲ್ಲಿ, ರಾಜೀನಾಮೆ ಪತ್ರ ವಾಪಸ್ ಪಡೆಯುವಂತೆ ಒತ್ತಡ ಹೆಚ್ಚಿದರಿಂದ, ಶಾಸಕ ಯಶವಂತರಾಯಗೌಡ ಪಾಟೀಲ ರಾಜ್ಯ ಸರ್ಕಾರದ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ರಾಜೀನಾಮೆ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ.



