ಇಂಡಿಯಾ-ಆಫ್ರಿಕಾ ಸರಣಿ: ತಿರುವನಂತಪುರಂಗೆ ಬಂದಿಳಿದ ಆಟಗಾರರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಇಂದು ಅಭ್ಯಾಸ ಆರಂಭಿಸಿದೆ.

ಸೆಪ್ಟೆಂಬರ್ 28 ರಂದು ಇಲ್ಲಿಯ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದ್ದು, ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಕೂಡ ಭಾನುವಾರ ರಾಜ್ಯ ರಾಜಧಾನಿ ತಲುಪಿದ್ದು, ಇಂದು ಅದು ಕೂಡ ಅಭ್ಯಾಸ ಆರಂಭಿಸಿದೆ.
ಟೀಂ ಇಂಡಿಯಾ ಇಂದು ಈಗಾಗಲೇ ಅಭ್ಯಾಸಕ್ಕಾಗಿ ಮೈದಾನವನ್ನು ತಲುಪಲಿದೆ. ಸಂಜೆ 5 ರಿಂದ ರಾತ್ರಿ 8 ರವರೆಗೆ ಅಭ್ಯಾಸ ನಡೆಸಲಿದೆ. ಆದರೆ, ಎದುರಾಳಿ ದಕ್ಷಿಣ ಆಫ್ರಿಕ ತಂಡವು ಮಧ್ಯಾಹ್ನ 1.00 ರಿಂದ 4.00 ರವರೆಗೆ ಮೈದಾನದಲ್ಲಿ ಅಭ್ಯಾಸ ನಡೆಸಲಿದೆ ಎಂದು ಕೆಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಬಾಜ್ ಅಹ್ಮದ್, ಆರ್. ಅಶ್ವಿನ್, ಯಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಾಬಸ್, ಕಗಿಸೊ ರಾಬಾದಾಸ್, ಟ್ರಿಸ್ಟಾನ್ ಸ್ಟಬ್ಸ್.

ಸ್ಥಳ ಮತ್ತು ಸಮಯ: ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಾಳೆ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!