ಭಾರತ- ಕೆನಡಾ ಮ್ಯಾಚ್ ನಡೆಯಲು ಬಿಡದ ಮಳೆರಾಯ: ಸೂಪರ್ 8 ಸುತ್ತಿಗೆ ರೋಹಿತ್ ಟೀಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಟಿ೨೦ ವಿಶ್ವಕಪ್ ನ ಇಂದಿನ ಭಾರತ ಹಾಗೂ ಕೆನಡಾ ನಡುವಿನ ಔಪಚಾರಿಕ ಪಂದ್ಯವು ರದ್ದಾಗಿದೆ.

ಫ್ಲೋರಿಡಾದಲ್ಲಿ ನಡೆಯಬೇಕಿದ್ದ ಪಂದ್ಯ ಮಳೆಯಿಂದ ಮೈದಾನ ಒದ್ದೆಯಾಗಿದ್ದರಿಂದ ಒಂದೇ ಒಂದು ಚೆಂಡು ಕೂಡ ಎಸೆಯಲಾಗದೆ ರದ್ದಾಗಿದೆ.

ಈ ಪಂದ್ಯದಲ್ಲಿ ಟಾಸ್ ಕೂಡ ನಡೆಯಲು ಸಾಧ್ಯವಾಗದ ಕಾರಣ ಎರಡು ಬಾರಿ ಫೀಲ್ಡ್ ಪರಿಶೀಲಿಸಿದ ಅಂಪೈರ್ ಪಂದ್ಯ ರದ್ದುಗೊಳಿಸಲು ನಿರ್ಧರಿಸಿದ್ದಾರೆ.

ಪಂದ್ಯಕ್ಕೂ ಮುನ್ನ ಫ್ಲೋರಿಡಾದಲ್ಲಿ ಸಾಕಷ್ಟು ಮಳೆ ಸುರಿದಿದ್ದರಿಂದ ಮೈದಾನ ಒದ್ದೆಯಾಗಿತ್ತು. ಹೀಗಾಗಿ ಮೈದಾನದ ಸಿಬ್ಬಂದಿ ಮೈದಾನವನ್ನು ಒಣಗಿಸಲು ಸಾಕಷ್ಟು ಪ್ರಯತ್ನಿಸಿದರು ಅದು ಸಾಧ್ಯವಾಗಲಿಲ್ಲ.

ಭಾರತ ತಂಡ ಈಗಾಗಲೇ ಎ ಗುಂಪಿನಿಂದ ಸೂಪರ್ 8 ಸುತ್ತಿಗೆ ಪ್ರವೇಶಿಸಿದ್ದು, ಈ ಪಂದ್ಯದ ರದ್ದತಿಯಿಂದ ತಂಡದ ಸ್ಥಾನದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ ಕೆನಡಾ ವಿರುದ್ಧ ಭಾರತ ತಂಡಕ್ಕೆ ಸೂಪರ್ ಎಂಟಕ್ಕೂ ಮುನ್ನ ಬೆಂಚ್ ಸಾಮರ್ಥ್ಯ ಪರೀಕ್ಷಿಸಲು ಉತ್ತಮ ಅವಕಾಶ ಸಿಕ್ಕಿತ್ತು. ಆದರೆ ಮಳೆಯಿಂದಾಗಿ ನಿರಾಸೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!