ಭಾರತ- ಕೆನಡಾದ ನಡುವಿನ ಬಿಕ್ಕಟ್ಟು ಸೇನಾ ಮೇಲೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ: ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಕೆನಡಾದ ನಡುವಿನ ಬಿಕ್ಕಟ್ಟು ಸೇನಾ ಸಂಬಂಧದ ಮೇಲೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ ಎಂದು ಭಾರತೀಯ ಸೇನೆ ಹೇಳಿದೆ.

ಜೂನ್ 18ರಂದು ಪಶ್ಚಿಮ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯ ಗುರುದ್ವಾರದ ಹೊರಗೆ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬಹಿರಂಗ ಹೇಳಿಕೆ ಈಗ ಎರಡು ದೇಶಗಳ ನಡುವೆ ಉದ್ವಿಗ್ನತೆಯನ್ನು ಸೃಷ್ಟಿಸಿದೆ.

ಇದರಿಂದ ಭಾರತ ಮತ್ತು ಕೆನಡಾದ ವ್ಯಾಪಾರಗಳು ಸ್ಥಗಿತಗೊಂಡಿದ್ದು, ಆದರೆ ಭಾರತೀಯ ಸೇನೆಯ ಮೇಲೆ ಪರಿಣಾಮ ಬೀರುವುದಿಲ್ಲ ಹಾಗೂ ಉಭಯ ದೇಶಗಳ ನಡುವಿನ ಮಿಲಿಟರಿ ಸಂಬಂಧಗಳು ಹಾಗೆಯೇ ಮುಂದುವರಿಯುತ್ತವೆ ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾರ್ಯತಂತ್ರ ಯೋಜನೆ) ಮೇಜರ್ ಜನರಲ್ ಅಭಿನಯ ರೈ ಹೇಳಿದ್ದಾರೆ.

ಅದೇ ರೀತಿ ದೆಹಲಿ ಕಂಟೋನ್ಮೆಂಟ್‌ನ ಮಾನೆಕ್ಷಾ ಕೇಂದ್ರದಲ್ಲಿ ಸೆಪ್ಟೆಂಬರ್ 26-27ರಿಂದ ಇಂಡೋ-ಪೆಸಿಫಿಕ್ ಸೇನಾ ಮುಖ್ಯಸ್ಥರ ಸಮ್ಮೇಳನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕೆನಡಾದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ವೇಯ್ನ್ ಐರ್ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಈ ಸಮ್ಮೇಳನವನ್ನು ಬಹುಪಕ್ಷೀಯ ಭದ್ರತಾ ಪಾಲುದಾರಿಕೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಎರಡು ದೇಶಗಳ ನಡುವಿನ ಸೇನಾ ಬಿಕ್ಕಟ್ಟುಗಳನ್ನು ತೆಗೆದು ಹಾಕಲು, ಜತೆಗೆ ಮುಕ್ತ ಇಂಡೋ-ಪೆಸಿಫಿಕ್‌ಗಾಗಿ ವೃತ್ತಿಪರ ಸೇನೆಗಳ ನಡುವೆ ನಂಬಿಕೆಯನ್ನು ಬೆಳೆಸಿಕೊಳ್ಳಲು ಮತ್ತು ಉತ್ತಮ ಸಂವಹನವನ್ನು ನಿರ್ಮಿಸಲು ನಡೆಸಲಾಗುವುದು ಎಂದು ಸೇನೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!