ವಾಂಡರ್ಸೆ ದಾಳಿಗೆ ಸಿಲುಕಿದ ಭಾರತ: ಶ್ರೀಲಂಕಾಕ್ಕೆ ಗೆಲುವಿನ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿಯಲ್ಲಿ ನಿರಾಸೆಯ ಪ್ರದರ್ಶನ ನೀಡುತ್ತಿದೆ. ಮೊದಲ ಏಕದಿನ ಪಂದ್ಯದಲ್ಲಿ ತನ್ನ ಗೆಲುವನ್ನು ಕೈಯಾರೆ ಕೈಚೆಲ್ಲಿದ್ದ ಟೀಂ ಇಂಡಿಯಾ ಗೆಲುವಿನ ಸನಿಹಕ್ಕೆ ಬಂದು ‘ಟೈ’ಗೆ ತೃಪ್ತಿಪಟ್ಟುಕೊಂಡಿತ್ತು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್ ಬಲೆಗೆ ಸಿಲುಕಿ ಸೋಲಿನ ಆಘಾತ ಎದುರಿಸಿದೆ.

ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಶ್ರೀಲಂಕಾ 32 ರನ್‌ಗಳ ಜಯ ಸಾಧಿಸಿ ತವರಿನಲ್ಲಿ ಪ್ರಾಬಲ್ಯ ಮೆರೆದಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಲಂಕಾ ಒಂಬತ್ತು ವಿಕೆಟ್‌ಗೆ 240 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಲೆಗ್ ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಅವರ ದಾಳಿಗೆ ಸಿಲುಕಿ ಪರದಾಡಿತು.42.2 ಓವರ್ ಗಳಲ್ಲಿ 208 ರನ್ ಗಳಿಗೆ ಆಲೌಟಾಯಿತು.

ಭಾರತದ ನಾಯಕ ರೋಹಿತ್ ಶರ್ಮಾ ಅವರ ಅದ್ಭುತ ಅರ್ಧಶತಕದ ಇನ್ನಿಂಗ್ಸ್ ಕೂಡ ವ್ಯರ್ಥವಾಯಿತು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!