ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಡಾದಲ್ಲಿರುವ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದ ಬೆನ್ನಲ್ಲೇ ಭಾರತದಲ್ಲಿಯೂ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯೊಬ್ಬರನ್ನು ಉಚ್ಛಾಟಿಸಲಾಗಿದೆ.
ಉಚ್ಛಾಟನೆಯಾದ ಅಧಿಕಾರಿಗೆ ಐದು ದಿನದಲ್ಲಿ ತಮ್ಮ ದೇಶಕ್ಕೆ ಮರಳಬೇಕೆಂದು ಭಾರತ ಸರ್ಕಾರ ಸೂಚಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತ ಕಾರಣ ಇರಬಹುದು ಎಂದು ಕೆನಡಾ ದೂರಿದ್ದು, ಭಾರತ ಈ ಆರೋಪಗಳನ್ನು ತಳ್ಳಿ ಹಾಕಿದೆ.
ಈ ಮಧ್ಯೆ ಮಹತ್ವದ ಬೆಳವಣಿಗೆಯಾಗಿ ಭಾರತದಲ್ಲಿ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯರನ್ನು ಭಾರತ ಉಚ್ಛಾಟಿಸಿದೆ.