10 ವರ್ಷಗಳಲ್ಲಿ ಬದಲಾಗಿದೆ ಭಾರತ…ಹೆಚ್ಚಾಗಿದೆ ಜನರ ನಂಬಿಕೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today’ Global Summit) ಜಾಗತಿಕ ಶೃಂಗಸಭೆಯ ಎರಡನೇ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (narendra modi) ಅವರು ಭಾಗವಹಿಸಿದರು.

ಈ ವೇಳೆ ಮಾತನಾಡಿದ ಮೋದಿ, ಇಡೀ ವಿಶ್ವಕ್ಕೆ ಭಾರತದ 10 ವರ್ಷದ ಪರಿಶ್ರಮ ಕಾಣುತ್ತಿದೆ. 10 ವರ್ಷದಲ್ಲಿ ಭಾರತ ಎಲ್ಲಾ ಕ್ಷೇತ್ರಗಳಲ್ಲಿ ಬದಲಾಗಿದೆ. ದೇಶದ ಸಾಮಾನ್ಯ ವ್ಯಕ್ತಿಯನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ. ಕೆಂಪು ಕೋಟೆಯಲ್ಲಿ ನಿಂತು ಭಾರತದ ಬಗ್ಗೆ ಮಾತನಾಡುತ್ತಿದ್ದರು. ಭಾರತ ದೇಶದ ಪ್ರಜೆಗಳು ಸೋಮಾರಿಗಳೆಂದು ಭಾಷಣ ಮಾಡಿದ್ದರು. ಈಗ ಇಡೀ ವಿಶ್ವವೇ ಭಾರತದ ಜೊತೆ ಸ್ನೇಹ ಮಾಡಲು ಮತ್ತು ವ್ಯವಹರಿಸಲು ಇಚ್ಚಿಸುತ್ತಿದೆ ಎಂದು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಸರ್ಕಾರ ಮತ್ತು ವ್ಯವಸ್ಥೆಯಲ್ಲಿ ಭಾರತದ ಜನರ ನಂಬಿಕೆ ಹೆಚ್ಚಾಗಿದೆ. ಜನರಿಗೆ ತಮ್ಮ ಮೇಲೆ ಇರುವಷ್ಟೇ ನಂಬಿಕೆ ದೇಶದ ಮೇಲೆ ಇದೆ, ಪ್ರತಿಯೊಬ್ಬ ಭಾರತೀಯನೂ ನಾನು ಏನು ಬೇಕಾದರೂ ಮಾಡಬಲ್ಲೆ, ನನಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಯೋಚಿಸುತ್ತಿರುತ್ತಾನೆ. ಜನರ ಮನಸ್ಥಿತಿ ಮತ್ತು ನಂಬಿಕೆಯ ಬದಲಾವಣೆಗೆ ನಮ್ಮ ಸರ್ಕಾರದ ಕಾರ್ಯ ಸಂಸ್ಕೃತಿಯೇ ದೊಡ್ಡ ಕಾರಣ. ಅದೇ ಅಧಿಕಾರಿಗಳಿದ್ದಾರೆ, ಅದೇ ಕಚೇರಿಗಳಿವೆ, ಅದೇ ಕಡತಗಳಿವೆ. ಸರ್ಕಾರಿ ಕಚೇರಿಗಳು ಸಮಸ್ಯೆಯಾಗಿಲ್ಲ. ಬದಲಾಗಿ ದೇಶದ ಜನರಿಗೆ ಸಹಾಯವಾಗುತ್ತಿವೆ ಎಂದರು.

ಹತ್ತು ವರ್ಷಗಳಲ್ಲಿ ಡಿಜಿಟಲ್​ ಕ್ಷೇತ್ರದಲ್ಲಿ ಬದಲಾವಣೆ ಆಗಿದೆ. 2024ರಲ್ಲಿ ದೇಶದ ಮ್ಯೂಚುಯಲ್‌ ಫಂಡ್​ನಲ್ಲಿ ಹೆಚ್ಚು ಹಣ ಸಂದಾಯ ಮಾಡಿದೆ. ಪಂಡಿತ್​ ನೆಹರು ಮಾಡಿದ ಡ್ಯಾಂ ಶಿಲಾನ್ಯಾಸ 60 ವರ್ಷದವರೆಗೂ ನೆನಗುದಿಗೆ ಬಿದ್ದಿತ್ತು. ಈಗ ಸರ್ದಾರ ಸರೋವರದ ಕಾರ್ಯವನ್ನು ನಮ್ಮ ಸರ್ಕಾರ ಪೂರ್ಣಗೊಳಿಸಿದೆ. ಪ್ರತಿ ತಿಂಗಳ ನಾನು ದಶಕದಿಂದ ಬಾಕಿ ಇರುವ ಫೈಲ್​ಗಳ ಅವಲೋಕನ ಮಾಡುತ್ತೇನೆ. ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ಇರುವ ಫೈಲ್​ಗಳನ್ನು ಖುದ್ದು ನಾನೇ ನೋಡುತ್ತೇನೆ. ಕಳೆದ ಹತ್ತು ವರ್ಷಗಳಲ್ಲಿ 17 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳ ಕಡತಗಳನ್ನು ಪರಿಶೀಲಿಸಿದ್ದೇನೆ. ಆದ್ದರಿಂದ ಈ ಯೋಜನೆಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು.

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭಾರತವು ರಿವರ್ಸ್ ಗೇರ್‌ನಲ್ಲಿತ್ತು. ಉತ್ತರ ಪ್ರದೇಶದಲ್ಲಿ ಸರಯೂ ಕಾಲುವೆ ಯೋಜನೆಗೆ 80ರ ದಶಕದಲ್ಲಿ ಶಿಲಾನ್ಯಾಸ ನೆರವೇರಿಸಲಾಗಿತ್ತು. ಆದ್ರೆ, ಈ ಯೋಜನೆಯು 4 ದಶಕಗಳಿಂದ ಹಾಗೇ ಇತ್ತು. ನಮ್ಮ ಸರ್ಕಾರಕ್ಕೆ ಬಂದ ನಂತರ ಅದನ್ನು ಪೂರ್ಣಗೊಳಿಸಿದ್ದೇವೆ. 60ರ ದಶಕದಲ್ಲಿ ಸರ್ದಾರ್ ಸರೋವರ ಯೋಜನೆಯ ಅಡಿಗಲ್ಲು ಹಾಕಲಾಯಿತ್ತು. ಅದರ ಕೆಲಸವೂ ಬಾಕಿ ಉಳಿದಿತ್ತು. ನಮ್ಮ ಸರ್ಕಾರ ರಚನೆಯಾದ ನಂತರ ಆ ಅಣೆಕಟ್ಟಿನ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡಿದ್ದೇವೆ.. 2002ರಲ್ಲಿ ಅಟಲ್ ಸುರಂಗಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಆದರೆ ಈ ಕೆಲಸವೂ ಸ್ಥಗಿತಗೊಂಡಿತ್ತು. ಅದನ್ನು ಸಹ ನಮ್ಮ ಸರ್ಕಾರ ಪೂರ್ಣಗೊಳಿಸಿದೆ. ಅಸ್ಸಾಂನ ಬೋಡಿ ಬಿಲ್ ಸೇತುವೆಯನ್ನು ನಮ್ಮ ಸರ್ಕಾರ ಬಂದ ನಂತರ ಅದನ್ನು ಪೂರ್ಣಗೊಳಿಸಿದ್ದೇವೆ ಎಂದರು.

ದೇಶದಲ್ಲಿ ಹಲವಾರು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಿದ್ದೇವೆ. ಲಕ್ಷದ್ವೀಪದಲ್ಲಿ ಆಪಟಿಕಲ್​ ಕೇಬಲ್​ ಅಳವಡಿಸಿದ್ದೇವೆ. ಭಾರದಲ್ಲಿ ಪ್ರತಿದಿನ 2 ಹೊಸ ಕಾಲೇಜು ಪ್ರಾರಂಭವಾಗುತ್ತಿವೆ. ಭಾರತದಲ್ಲಿ ಪ್ರತಿದಿನ 55 ಸಾವಿರ ಜನರನ್ನು ಬಡತನ ರೇಖೆಯಿಂದ ಹೊರಗೆ ತಂದಿದ್ದೇವೆ. ಈವರೆಗೆ 25 ಕೋಟಿ ಜನರನ್ನು ಬಡತನ ರೇಖೆಯಿಂದ ಹೊರ ತರುವ ಕಾರ್ಯ ಮಾಡಿದ್ದೇವೆ ಎಂದು ತಮ್ಮ ಸರ್ಕಾರದ ಕಾರ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ಮೋದಿಯ ಗ್ಯಾರಂಟಿಯ ಬಗ್ಗೆ ಪ್ರತಿಯೊಬ್ಬರಿಗೂ ಸಿಗಲೇಬೇಕು. ನಾವು, ದೇಶವೇ ಪ್ರಥಮ ಎಂಬ ಸಿದ್ದಾಂತದಿಂದ ದೇಶ ನಡೆಸುತ್ತಿದ್ದೇವೆ. ತ್ರಿವಳಿ ತಲಾಖ್​ ಅಂತಹ ಹಲವಾರು ಜನಪರ ಕಾರ್ಯಗಳನ್ನು ಮಾಡಿದೆ. 5ಜಿ ನೆಟ್​ವರ್ಕ್​ ಕ್ಷೇತ್ರದಲ್ಲಿ ಯೂರೋಪ ದೇಶವನ್ನು ಹಿಂದೆ ಹಾಕಿದೆ. ಭಾರತ ಮುಂದಿನ ಭವಿಷ್ಯದ ಹೆಚ್ಚು ಹೆಚ್ಚು ಆಲೋಚನೆ ಮಾಡುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!