ಭಾರತಕ್ಕೆ ಇರುವುದು ಒಂದೇ ಭಾಷೆ, ಅದು ಮನರಂಜನೆ: ಅಜಯ್ ದೇವಗನ್​ ಗೆ ತಿರುಗೇಟು ನೀಡಿದ ಸೋನು ಸೂದ್ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸ್ಯಾಂಡಲ್​ವುಡ್ ನಟ ಸುದೀಪ್ ಹಾಗೂ ಬಾಲಿವುಡ್​ನ ಅಜಯ್ ದೇವಗನ್​ ನಡುವೆ ಉಂಟಾಗಿದ್ದ ‘ಹಿಂದಿ ರಾಷ್ಟ್ರ ಭಾಷೆ’ಯ ಕುರಿತ ಅನೇಕ ನಟ ನಟಿಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನೇಕರು ಕಿಚ್ಚ ಸುದೀಪ್ ಪರ ಬ್ಯಾಟ್​ ಬೀಸಿದ್ದಾರೆ.
ಇದೀಗ ಬಹುಭಾಷಾ ನಟ ಸೋನು ಸೂದ್ ಸಹ ಅಜಯ್​ ದೇವಗನ್​​ಗೆ ತಿರುಗೇಟು ನೀಡಿದ್ದು, ಭಾರತಕ್ಕೆ ಇರುವುದು ಒಂದೇ ಭಾಷೆ, ಅದು ಮನರಂಜನೆ ಎಂದರು.
‘ಹಿಂದಿಯನ್ನು ನಾವು ರಾಷ್ಟ್ರ ಭಾಷೆ ಎಂದು ಕರೆಯಲು ಸಾಧ್ಯವಿಲ್ಲ. ನೀವು ಯಾವ ಚಿತ್ರರಂಗಕ್ಕೆ ಸೇರಿದವರು ಎಂಬುದು ಮುಖ್ಯವಲ್ಲ. ನೀವು ಜನರಿಗೆ ಮನರಂಜನೆ ನೀಡಿದರೆ ಅವರು ನಿಮ್ಮನ್ನು ಪ್ರೀತಿಸಲು ಶುರು ಮಾಡುತ್ತಾರೆ. ಜೊತೆಗೆ ನಿಮ್ಮನ್ನು ಒಪ್ಪಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.
ಸಿನಿಮಾ ನಿರ್ಮಾಪಕರು ಹಾಗೂ ನಟರು ಜನರ ಸಂವೇದನೆಯನ್ನು ಹೇಗೆ ಗೌರವಿಸಬೇಕು ಎಂಬುದನ್ನು ಕಲಿತುಕೊಳ್ಳಬೇಕು. ಹಿಂದಿನ ಕಾಲದ ಪರಿಸ್ಥಿತಿ ಈಗ ಇಲ್ಲ. ಒಳ್ಳೆಯ ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು.
ಸುದೀಪ್​- ಅಜಯ್ ದೇವಗನ್​ ನಡುವಿನ ಭಾಷಾ ಚರ್ಚೆ ಅಂತ್ಯಗೊಳ್ಳುತ್ತಿದ್ದಂತೆ ಅನೇಕರು ಸುದೀಪ್​ ಪರವಾಗಿ ಟ್ವೀಟ್ ಮಾಡಿ, ಅಜಯ್ ದೇವಗನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಟಿ ರಮ್ಯಾ, ನಿನಾಸಂ ಸತೀಶ್, ಮನೋಜ್ ಬಾಜಪೇಯ್​ ಹಾಗು ರಾಮಗೋಪಾಲ್ ವರ್ಮಾ ಸಹ ಸೇರಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!