ಚಳಿಗಾಲದ ಒಲಿಂಪಿಕ್ಸ್ ಉದ್ಘಾಟನೆ, ಸಮಾರೋಪದಲ್ಲಿ ಭಾರತ ಭಾಗಿಯಾಗುವುದಿಲ್ಲ: ಅರಿಂದಮ್ ಬಾಗ್ಚಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಲ್ವಾನ್ ಕಣಿವೆಯ ಘರ್ಷಣೆಯಲ್ಲಿ ಭಾಗಿಯಾಗಿದ್ದ ಸೇನಾ ಅಧಿಕಾರಿ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನ ಸಾಂಪ್ರದಾಯಿಕ ಜ್ಯೋತಿ ಹಿಡಿದಿದ್ದನ್ನು ಭಾರತ ರಾಜತಾಂತ್ರಿಕ ಮಾರ್ಗದಲ್ಲಿ ಆಕ್ಷೇಪಿಸಿದೆ.

ಈ ಬಗ್ಗೆ ವರದಿಗಳನ್ನು ಗಮನಿಸಿದ್ದೇವೆ. ಇಲ್ಲಿಯೂ ಚೀನಾ ರಾಜಕೀಯ ಮಾಡಿದೆ. ಒಲಿಂಪಿಕ್ಸ್‌ನ್ನು ರಾಜಕೀಯಗೊಳಿಸಲು ಆಯ್ಕೆ ಮಾಡಿದ್ದು ನಿಜಕ್ಕೂ ವಿಷಾದನೀಯ. ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಒಲಿಂಪಿಕ್ಸ್ ಉದ್ಘಾಟನೆ ಮತ್ತು ಸಮಾರೋಪದಲ್ಲಿ ಭಾಗಿಯಾಗುವುದಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಚೀನಾದಲ್ಲಿ ಭಾರತದ ರಾಯಭಾರಿಯಾಗಿ ಪ್ರದೀಪ್ ಕುಮಾರ್ ರಾವತ್ ಅವರನ್ನು ನಿಯೋಜಿಸಲಾಗಿದ್ದು, ಅವರಿನ್ನೂ ಅಧಿಕಾರ ಸ್ವೀಕರಿಸಬೇಕಿದೆ. ಸದ್ಯ ಪ್ರಭಾರ ರಾಯಭಾರಿ ಚೀನಾದಲ್ಲಿ ಇದ್ದಾರೆ.
ಚಳಿಗಾಲದ ಒಲಿಂಪಿಕ್ಸ್ ಜ್ಯೋತಿ ಹಿಡಿದಿರುವ ಚೀನಾ ಸೇನೆಯ ರೆಜಿಮೆಂಡ್ ಕಮಾಂಡರ್ ಕ್ವಿ ಫಾಬಾವೋ ಗಾಲ್ವಾನ್ ಘರ್ಷಣೆಯಲ್ಲಿ ಭಾಗಿಯಾಗಿದ್ದರು. ಘರ್ಷಣೆ ವೇಳೆ ಕ್ವಿ ತಲೆಗೆ ಗಂಭೀರ ಗಾಯವಾಗಿತ್ತು. ಕ್ವಿ ಜ್ಯೋತಿ ಹಿಡಿದಿರುವುದನ್ನು ಅಮೆರಿಕ ಕೂಡ ಆಕ್ಷೇಪಿಸಿದೆ. ಈ ವಿಷಯದಲ್ಲಿ ಭಾರತದ ಪರ ನಿಲ್ಲುತ್ತೇವೆ ಎಂದು ಹೇಲಿದೆ. ಇನ್ನು ಚಳಿಗಾಲದ ಒಲಿಂಪಿಕ್ಸ್‌ನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡುವುದಿಲ್ಲ ಎಂದು ಪ್ರಸಾರ ಭಾರತಿ ಸಿಇಒ ಶಶಿ ಶೇಖರ ವೆಂಪತಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!