ಭಾರತ- ಪಾಕಿಸ್ತಾನ ಯುದ್ಧ ಭೀತಿ: ಕುತುಬ್ ಮಿನಾರ್, ಕೆಂಪು ಕೋಟೆ ಸಹಿತ ಐತಿಹಾಸಿಕ ತಾಣಗಳಲ್ಲಿ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಕುತುಬ್ ಮಿನಾರ್, ಕೆಂಪು ಕೋಟೆ ಸೇರಿ ದೆಹಲಿ ಹಲವು ಐತಿಹಾಸಿಕ ತಾಣಗಳಿಗೆ ಭದ್ರತೆ ಹೆಚ್ಚಿಸಲಾಗಿದೆ.

ದೆಹಲಿ ಪೊಲೀಸರು ಕೆಂಪು ಕೋಟೆ, ಕುತುಬ್ ಮಿನಾರ್ ಸೇರಿದಂತೆ ನಗರದ ಐತಿಹಾಸಿಕ ಸ್ಮಾರಕಗಳ ಸುತ್ತಲೂ ಭದ್ರತೆ ಹೆಚ್ಚಿಸಿದ್ದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇರಿಸಲಾಗಿದೆ.

ದೆಹಲಿಯ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಅವರ ಸುರಕ್ಷತೆಗಾಗಿ ಪೊಲೀಸರು ಈ ನಿರ್ಧಾರ ಕೈಗೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!