ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತಕ್ಕೆ ಸಾಕ್ಷ್ಮಗಳನ್ನು ಹಂಚಿಕೊಳ್ಳಲಾಗಿದೆ ಎಂಬ ಕೆನಡಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ.ದೆ.
ತನ್ನ ನೆಲದಲ್ಲಿ ಪ್ರಜೆಗಳನ್ನು ಗುರಿಯಾಗಿಸಿಕೊಂಡು ರಹಸ್ಯ ಕಾರ್ಯಾಚರಣೆಗಳನ್ನು ನಡೆಸುವ ಚಟುವಟಿಕೆಗಳಲ್ಲಿ ಭಾರತ ತೊಡಗಿಸಿಕೊಂಡಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪ ಮಾಡಿದ್ದರು. ಆದರೆ ಇದು ಸತ್ಯವಲ್ಲ ಎಂದು ಭಾರತ ತಿರುಗೇಟು ನೀಡಿದೆ.
ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಏಜೆಂಟರ ಪಾತ್ರ ಇರುವುದನ್ನು ಸಾಬೀತುಪಡಿಸುವ ನಂಬಲರ್ಹ ಪುರಾವೆಗಳನ್ನು ಒದಗಿಸಲಾಗಿದೆ ಎಂಬ ಕೆನಡಾದ ಅಧಿಕಾರಿಗಳ ಆರೋಪಗಳನ್ನು ಭಾರತ ನಿರಾಕರಿಸಿದೆ.
ಕೆನಡಾದಲ್ಲಿರುವ ತನ್ನ ಹೈಕಮಿಷನರ್ ಅವರನ್ನು ಸೋಮವಾರ ಭಾರತ ವಾಪಸ್ ಕರೆಸಿಕೊಳ್ಳುವುದರೊಂದಿಗೆ ಉಭಯ ದೇಶಗಳ ನಡುವಣ ರಾಜತಾಂತ್ರಿಕ ಸಂಬಂಧದಲ್ಲಿ ಮತ್ತಷ್ಟು ಬಿರುಕು ಮೂಡಿತ್ತು. ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನೂ ತನಿಖೆಗೆ ಒಳಪಡಿಸುವುದಾಗಿ ಕೆನಡಾ ಸರ್ಕಾರ ಹೇಳಿತ್ತು. ಇದರ ಬೆನ್ನಲ್ಲೇ ಭಾರತ ಈ ನಿರ್ಧಾರ ತೆಗೆದುಕೊಂಡಿತ್ತು.