ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ 20 ಐ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಗುರುವಾರ ಮಧ್ಯಾಹ್ನ ಘೋಷಣೆ ಈ ಘೋಷಣೆ ಮಾಡಲಾಗಿದೆ. ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ತಂಡಕ್ಕೆ ಸೇರ್ಪಡೆಯಾಗಿದ್ದು, ಫಿಟ್ನೆಸ್ಗೆ ಆಧರಿಸಿ ಆಡುವ ನಿರ್ಣಯ ಮಾಡಲಾಗುವುದು ಎಂದು ಹೇಳಿದೆ.
ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಪ್ರವಾಸದಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅಂತಿಮ T20I ಸಮಯದಲ್ಲಿ ತೊಡೆಸಂದು ಗಾಯಕ್ಕೆ ಒಳಗಾಗಿರುವ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ದೃಢಪಡಿಸಿದೆ. ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೂ ವಿಶ್ರಾಂತಿ ನೀಡಲಾಗಿದೆ. ವಿಶೇಷವೆಂದರೆ ಟಿ 20 ವಿಶ್ವಕಪ್ ಬಳಿಕ ಆರ್. ಅಶ್ವಿನ್ ಟಿ. 20 ತಂಡಕ್ಕೆ ಮರಳಿದ್ದಾರೆ. ರುತುರಾಜ್ ಗಾಯಕ್ವಾಡ್ ಮತ್ತು ಉಮ್ರಾನ್ ಮಲಿಕ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಭಾರತ ತಂಡ ಹೀಗಿದೆ..
ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಶಭ್ ಪಂತ್, ಹಾರ್ದಿಕ್ ಪಾಂಡ್ಯ, ಆರ್ ಜಡೇಜಾ, ಅಕ್ಸರ್ ಪಟೇಲ್, ಆರ್ ಅಶ್ವಿನ್, ಆರ್ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.