ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20ಯಲ್ಲಿ ಸರಣಿ ಗೆದ್ದ ನಂತರ ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಮೊದಲನೇ ಏಕದಿನ ಪಂದ್ಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿಯಲ್ಲಿ ಇಂದು ನಡೆಯಲಿದೆ. ಗಾಯದಿಂದ ದೂರ ಉಳಿದಿದ್ದ ನಾಯಕ ರೋಹಿತ್ ಶರ್ಮಾ ತಂಡಕ್ಕೆ ವಾಪಸ್ ಆಗಿದ್ದಾರೆ. ಹೆಬ್ಬೆರಳಿನ ಗಾಯದ ಕಾರಣದಿಂದ ಜಸ್ಪ್ರೀತ್ ಬುಮ್ರಾ ತಂಡದಿಂದ ದೂರ ಉಳಿದಿದ್ದಾರೆ.
ಸಂಭಾವ್ಯ ತಂಡ ಹೀಗಿದೆ.
ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಾಕ್), ಶ್ರೇಯಸ್ ಅಯ್ಯರ್/ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಇಂದು ಮಧ್ಯಾಹ್ನ 01:30ಕ್ಕೆ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ.