ಹೊಸದಿಗಂತ ಡಿಜಿಟಲ್ ಡೆಸ್ಕ್
ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 1 ವಿಕೆಟ್ ಗಳ ಆಘಾತಕಾರಿ ಸೋಲನ್ನು ಅನುಭವಿಸಿರುವ ಟೀಂ ಇಂಡಿಯಾ ಇಂದು ಡಾಕಾದಲ್ಲಿ ನಡೆಯುತ್ತಿರುವ 2ನೇ ಪಂದ್ಯದಲ್ಲಿ ಬಾಂಗ್ಲಾವನ್ನು ಎದುರಿಸುತ್ತಿದೆ. ಈ ಪಂದದಲ್ಲಿ ಸೋತರೆ ಭಾರತ ಸರಣಿ ಕಳೆದುಕೊಳ್ಳಲಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಕಳೆದ ಪಂದ್ಯದಲ್ಲಿ ಆಡಿದ್ದ ಆಲ್ರೌಂಡರ್ ಶಹಬಾಜ್ ಅಹ್ಮದ್ ಸ್ಥಾನದಲ್ಲಿ ಅಕ್ಷರ್ ಪಟೇಲ್ ಕಣಕ್ಕಿಳಿಯುತ್ತಿದ್ದಾರೆ. ಜೊತೆಗೆ ವೇಗಿ ಕುಲದೀಪ್ ಸೇನ್ ಸ್ಥಾನದಲ್ಲಿ ಉಮ್ರಾನ್ ಮಲಿಕ್ ಸ್ಥಾನಪಡೆದಿದ್ದಾರೆ. ಭಾರತ ಈ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಗಳಿಂದ ಪ್ರಬಲ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ. ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಹೊರತುಪಡಿಸಿದರೆ ಎಲ್ಲಾ ಆಟಗಾರರು ವಿಫಲರಾಗಿದ್ದರು. ಬೌಲಿಂಗ್ ನಲ್ಲಿ ಸತತವಾಗಿ ಮಿಂಚುತ್ತರುವ ಮೊಹಮದ್ ಸಿರಾಜ್ ಬಾಂಗ್ಲಾ ಬ್ಯಾಟರ್ ಗಳಿಗೆ ಸವಾಲಾಗುವ ನಿರೀಕ್ಷೆ ಇದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ