ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಂಚಿಯ ಜೆಎಸ್ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಟಿ 20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ಭಾನುವಾರ ಭಾರತ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಪ್ರವಾಸಿಗರು ತಮ್ಮ ಆಡುವ ಹನ್ನೊಂದರ ಬಳಗದಲ್ಲಿ ಮೂರು ಬದಲಾವಣೆಗಳನ್ನು ಮಾಡಿದ್ದಾರೆ. ರೀಜಾ ಹೆಂಡ್ರಿಕ್ಸ್, ಜಾರ್ನ್ ಫೋರ್ಚುಯಿನ್ ಮತ್ತು ಅನ್ರಿಚ್ ನಾರ್ಟ್ಜೆ ಅವರು ಆಡುಗ ಬಳಗ ಸೇರಿದ್ದಾರೆ. ಭಾರತವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದು, ಐಪಿಎಲ್ ನಲ್ಲಿ ಆರ್ಸಿಬಿ ತಂಡದ ಪ್ರಮುಖ ಆಟಗಾರ, ಯುವ ಆಲ್ರೌಂಡರ್ ಶಹಬಾಜ್ ಅಹ್ಮದ್ ಚೊಚ್ಚಲಬಾರಿಗೆ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದಾರೆ. ದೀಪಕ್ ಚಾಹರ್ ಬದಲಿಗೆ ತಂಡ ಸೇರಿರುವ ವಾಷಿಂಗ್ಟನ್ ಸುಂದರ್ ಅವರು ಪೇಯಿಂಗ್ 11 ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ್ದ ಖುತುರಾಜ್ ಹಾಗೂ ರವಿ ಬಿಷ್ಣೋಯಿ ತಂಡದಿಂದ ಹೊರಬಿದ್ದಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ:
ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಾಕ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್ (ಸಿ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ.
ಭಾರತ ತಂಡ:
ಶಿಖರ್ ಧವನ್ (c), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (WK), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್.