ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ: ಪಂದ್ಯಕ್ಕೆ ಮಳೆ ಭೀತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ 3ನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ಶಿಖರ್‌ ಧವನ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಸರಣಿಯು 1-1 ರಲ್ಲಿ ಸಮಬಲಗೊಂಡಿದ್ದು, ಸರಣಿ ಗೆಲುವಿಗೆ ಎರಡೂ ತಂಡಗಳು ಸರಣಿ ಗೆಲುವಿಗೆ ತಹತಹಿಸುತ್ತಿವೆ. ಪಂದ್ಯದ ಆರಂಭಕ್ಕೂ ಮುನ್ನ ಸುರಿದ ಮಳೆಯಿಂದಾಗಿ ಒದ್ದೆಯಾದ ಔಟ್‌ಫೀಲ್ಡ್‌ನಿಂದಾಗಿ ಟಾಸ್ ವಿಳಂಬವಾಗಿದೆ. ಮಧ್ಯಾಹ್ನ 1.30 ಕ್ಕೆ ಪ್ರಾರಂಭವಾಗಬೇಕಿದ್ದ ಪಂದ್ಯ 2 ಗಂಟೆಗೆ ಪ್ರಾರಂಭವಾಗುತ್ತಿದೆ.
ʼವಿಕೆಟ್ ನಲ್ಲಿ ತೇವಾಂಶವಿರುವುದರಿಂದ ಬೌರ್‌ ಗಳಿಗೆ ಪಿಚ್‌ ನೆರವೀಯಲಿದೆ. ಈ ಕಾರಣದಿಂದ ಬೌಲಿಂಗ್‌ ಆಯ್ದುಕೊಳ್ಳುವುದಾಗಿʼ ಟಾಸ್ ಗೆದ್ದ ಧವನ್ ಹೇಳಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಸೌತ್‌ ಆಫ್ರಿಕಾ ತಂಡದಲ್ಲಿ ಹಲವಾರು ಬದಲಾವಣೆ ಮಾಡಲಾಗಿದ್ದು, ಡೇವಿಡ್ ಮಿಲ್ಲರ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್‌ 11
ಶಿಖರ್ ಧವನ್, ಶುಬ್ಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11
ಜಾನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜಾರ್ನ್ ಫೋರ್ಚುಯಿನ್, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!