ಭಾರತ- ವೆಸ್ಟ್ ಇಂಡೀಸ್ ಸರಣಿ: ಟೀಮ್ ಇಂಡಿಯಾಕ್ಕೆ ಯುವ ಆಟಗಾರರ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ- ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಗೆ ಮುನ್ನ ಬಿಸಿಸಿಐ ಯುವ ಆಟಗಾರರಾದ ಶಾರುಖ್ ಖಾನ್ ಮತ್ತು ಸಾಯಿ ಕಿಶೋರ್ ಅವರನ್ನ ತಂಡದಲ್ಲಿ ಸ್ಟ್ಯಾಂಡ್‌ಬೈ ಆಟಗಾರರನ್ನಾಗಿ ಸೇರಿಸಲು ನಿರ್ಧರಿಸಿದೆ.ಕೊರೋನಾ ಅಪಾಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಇಬ್ಬರನ್ನೂ ತಂಡಕ್ಕೆ ಸೇರಿಸಲಾಗಿದೆ.
ಹಾಗಾಗಿ ಈ ಇಬ್ಬರೂ ಆಟಗಾರರು ಟೀಮ್ ಇಂಡಿಯಾದೊಂದಿಗೆ ಬಯೋ ಬಬಲ್‌ನ ಭಾಗವಾಗಲಿದ್ದಾರೆ.
ಶಾರುಖ್ ಮತ್ತು ಸಾಯಿ ಕಿಶೋರ್ ರಾಷ್ಟ್ರೀಯ ಮಟ್ಟದಲ್ಲಿ ತಮಿಳುನಾಡಿನ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.
ಕಳೆದ ವರ್ಷ ಕೋಚ್ ರಾಹುಲ್ ದ್ರಾವಿಡ್ ಅವರ ಮೇಲ್ವಿಚಾರಣೆಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತೀಯ ತಂಡದಲ್ಲಿ ಸಾಯಿ ಕಿಶೋರ್ ನೆಟ್ ಬೌಲರ್‌ಗಳ ಗುಂಪಿನ ಭಾಗವಾಗಿದ್ದರು
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಫೆಬ್ರವರಿ 6 ರಂದು, ಎರಡನೇ ಏಕದಿನ ಫೆಬ್ರವರಿ 9ರಂದು ಮತ್ತು ಮೂರನೇ ಪಂದ್ಯ ಫೆಬ್ರವರಿ 11 ರಂದು ನಡೆಯಲಿದೆ. ಸರಣಿಯ ಎಲ್ಲಾ ಪಂದ್ಯಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!