ಹೊಸದಿಗಂತ ಡಿಜಿಟಲ್ ಡೆಸ್ಕ್
ಸರ್ವ ರೀತಿಯಲ್ಲೂ ಪಾಕಿಸ್ತಾನ ದಿವಾಳಿಯಾದರು ಅಲ್ಲಿನ ನಾಯಕರು ಮಾತ್ರ ಅಹಂಕಾರದ ಮಾತುಗಳನ್ನಾಡುವುದು, ಭಾರತದ ವಿರುದ್ಧ ಉದ್ಧಟತನದ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, 2026ರ ನವೆಂಬರ್ನಲ್ಲಿ ಭಾರತವು (India) ತುಂಡು ತುಂಡಾಗುತ್ತದೆ ಎಂಬುದಾಗಿ ಪಾಕಿಸ್ತಾನದ (Pakistan) ಮಾಜಿ ಸಂಸದನೊಬ್ಬ (Pakistan ex Senator) ನಾಲಗೆ ಹರಿಬಿಟ್ಟಿದ್ದಾನೆ.
ಸುದ್ದಿವಾಹಿನಿಯೊಂದರ ಜತೆ ಮಾತನಾಡುವ ವೇಳೆ ಮಾಜಿ ಸಂಸದ ಫೈಸಲ್ ರಾಜಾ ಅಬಿದಿ , ಭಾರತದ ಸಂಸತ್ತಿನಲ್ಲಿ ಅಖಂಡ ಭಾರತ ಕಲ್ಪನೆಯ ನಕ್ಷೆ ಹಾಕಲಾಗಿದೆ. ಈ ನಕ್ಷೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್ ಹಾಗೂ ಪಾಕಿಸ್ತಾನವೂ ಸೇರಿದೆ. ಆದರೆ, ಒಂದು ಮಾತು ನೆನಪಿರಲಿ. 2026ರ ನವೆಂಬರ್ನಲ್ಲಿ ಭಾರತವು ಚೂರು ಚೂರಾಗುತ್ತದೆ. ನರೇಂದ್ರ ಮೋದಿ ಅವರ ಹಿಂದುತ್ವ ಅಜೆಂಡಾ ಕೂಡ ಪತನವಾಗುತ್ತದೆ ಎಂದು ಹೇಳಿದ್ದಾನೆ.
ಅಖಂಡ ಭಾರತ ಕಲ್ಪನೆಯ ಕುರಿತು ಪಾಕಿಸ್ತಾನ ಮಾತನಾಡಿದರೆ ತಮಾಷೆ ಮಾಡುತ್ತಾರೆ. ಆದರೆ, 2026ರ ನವೆಂಬರ್ 26ರಂದು ಅಲ್ಲಾ ಪಾಕಿಸ್ತಾನದ ಪರವಾಗಿರುತ್ತಾನೆ. ಅಂದು ನಡೆಯುವ ಘಟನೆಯು ನಿಮ್ಮನ್ನು ಅಚ್ಚರಿಯ ಮಡುವಿನಲ್ಲಿ ಬೀಳಿಸುತ್ತದೆ. ಮೋದಿ ಹಿಂದುತ್ವದಿಂದ ಹೊರಗೆ ಬರಲಿರುವ ಜನ, ಪ್ರಾಣ ಉಳಿದರೆ ಸಾಕು ಎಂದು ಹೇಳುತ್ತಾರೆ. ಪಾಕಿಸ್ತಾನದ ಶಸ್ತ್ರಾಸ್ತ್ರಗಳು ಹಾಗೂ ಮಾನವ ಸಂಪನ್ಮೂಲವು ಭಾರತದ ನಾಶಕ್ಕೆ ಸಿದ್ಧವಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿಯೇ ಭಾರತ ತುಂಡು ತುಂಡಾಗುವುದೇ ಮುಖ್ಯ ಎಂಬುದಾಗಿ ನಾಲಗೆ ಹರಿಬಿಟ್ಟಿದ್ದಾನೆ.
ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದ್ದಾರೆ. ಅವರ ಪ್ರತಿಪಾದನೆಗೆ ಜನರಿಂದ ಅಪಾರ ಬೆಂಬಲವೂ ವ್ಯಕ್ತವಾಗುತ್ತಿದೆ. ಹಾಗಾಗಿ, ಭಾರತವು ಚೂರು ಚೂರು ಆಗುವುದು ಮುಖ್ಯ ಎಂಬುದಾಗಿ ಅಬಿದಿ ಹೇಳಿದ್ದಾನೆ. ಆ ಮೂಲಕ ಭಾರತದ ಮೇಲೆ ಪಾಕಿಸ್ತಾನವು ಶಸ್ತ್ರಾಸ್ತ್ರಗಳ ಸಮೇತ ದಾಳಿ ಮಾಡುತ್ತದೆ ಎಂಬುದರ ಮುನ್ಸೂಚನೆ ನೀಡಿದ್ದಾನೆ.