ಗಡಿ ನುಸುಳಲೆತ್ನಿಸಿದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಉರಿ ಬಾರಾಮುಲ್ಲಾದಲ್ಲಿ ಎಲ್‌ಒಸಿ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನ ನಡೆಸುತ್ತಿದ್ದ 3 ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಸೇನಾ ಗುಪ್ತಚರ ಸಂಸ್ಥೆಗಳ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ ನ ಕಮಲ್‌ ಕೋಟೆ ಪ್ರದೇಶದ ಮಡಿಯನ್ ನಾನಕ್ ಪೋಸ್ಟ್ ಬಳಿ ಎಲ್‌ಒಸಿಯ ಈ ಭಾಗದಲ್ಲಿ ನುಸುಳಲು ಪ್ರಯತ್ನಿಸಿದ ಭಯೋತ್ಪಾದಕರನ್ನು ಭದ್ರತಾ ಪಡೆ ಸಿಬ್ಬಂದಿಸದೆಬಡಿದಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ದಟ್ಟವಾದ ಗಿಡಗಂಟಿಗಳು, ಮರದ ಎಲೆಗಳ ಮರೆಯ ನಡುವೆ ನಿರಂತರ ಮಳೆ ಸುರಿಯುವ ಸಂದರ್ಭದಲ್ಲಿ ಗಡಿಯೊಳಗೆ ನುಸಳಲು ಭಯೋತ್ಪಾದಕರು ಮುಂದಾಗಿದ್ದಾರೆ. ಭಾರೀ ಗುಂಡಿನ ಚಕಮಕಿ ನಡೆದಿದ್ದು, ಭಯೋತ್ಪಾದಕರ ಮೂರು ಶವಗಳು, ಎರಡು ಎಕೆ ರೈಫಲ್‌ ಗಳು, ಒಂದು ಚೀನಾದ ಎಂ -16 ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ಸಿಬ್ಬಂದಿ ವಶಪಡಿಸಿಕೊಂಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!