February 22, 2026
Sunday, February 22, 2026
spot_img

ಭಾರತೀಯರು ಜಗತ್ತಿಗೆ ಉಪಕಾರಿ, ಸ್ವದೇಶಕ್ಕೆ ಏನು ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್​ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತದ ಪ್ರತಿಭೆಗಳು ಜಾಗತಿಕ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ 150 ಕೋಟಿ ಜನರಿರುವ ದೇಶವು ತನ್ನದೇ ಆದ ಕಾರ್ಯಾಚರಣಾ ವ್ಯವಸ್ಥೆಯನ್ನು ಹೊಂದಿಲ್ಲದಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಯೂಟ್ಯೂಬ್ ವಾಹಿನಿಯೊಂದರಲ್ಲಿ ಸಂದರ್ಶನದಲ್ಲಿ ಮಾತನಾಡಿದ ಪಿತ್ರೋಡಾ, ಭಾರತವು ‘ಸ್ಥಳೀಯ’ ಯುವ ಪ್ರತಿಭೆಗಳ ದೊಡ್ಡ ನೆಲೆಯನ್ನು ಅಭಿವೃದ್ಧಿಪಡಿಸಿದೆ. ಆದರೆ ದೇಶಕ್ಕೆ ಯಾವುದೇಪ್ರ ಯೋಜವಾಗಿಲ್ಲ ಎಂದು ಹೇಳಿದರು.

ಪ್ರಪಂಚದಾದ್ಯಂತದ ಬಹುರಾಷ್ಟ್ರೀಯ ಕಂಪನಿಗಳಿಗೆ ಇಲ್ಲಿನ ಪ್ರತಿಭೆಗಳು ಪ್ರೋಗ್ರಾಮಿಂಗ್, ಬ್ಯಾಂಕಿಂಗ್, ಕಾನೂನು ವ್ಯವಸ್ಥೆಗಳು, ಕೈಗಾರಿಕೆ, ಉತ್ಪಾದನೆ ಮತ್ತು ಲಾಜಿಸ್ಟಿಕ್ಸ್‌ನಲ್ಲಿ ಸಹಾಯ ಮಾಡುತ್ತದೆ. ಆದರೆ ತನ್ನದೇ ಆದ ಜಾಗತಿಕ ಮಟ್ಟದ ತಂತ್ರಜ್ಞಾನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿಲ್ಲ ಎಂದು ಹೇಳಿದರು.

1.5 ಬಿಲಿಯನ್ ಜನರಿರುವ ದೇಶವು ತನ್ನದೇ ಆದ ಆಪರೇಟಿಂಗ್ ಸಿಸ್ಟಮ್ ಅನ್ನು ಹೊಂದಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿ. ನಾವು ಮೊಬೈಲ್ ಫೋನ್‌ಗಳಿಗೆ ಆಪರೇಟಿಂಗ್ ಸಿಸ್ಟಮ್ ಅನ್ನು ಸಹ ಅಭಿವೃದ್ಧಿಪಡಿಸಲು ಸಾಧ್ಯವಾಗಲಿಲ್ಲ. ನಾವು ನಿಜವಾಗಿಯೂ ನಮ್ಮ ಪ್ರತಿಭೆಯನ್ನು ಇತರರಿಗೆ ಸೇವೆ ಸಲ್ಲಿಸಲು ಬಳಸಿದ್ದೇವೆ ಎಂದು ಅವರು ಹೇಳಿದರು.

ಪಿಟ್ರೋಡಾ ಅವರ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಅನ್ನು ನೇರವಾಗಿ ಗುರಿಯಾಗಿಸಿಕೊಂಡಿದೆ. ಲಷ್ಕರ್-ಇ-ಕಾಂಗ್ರೆಸ್ ನ ಮುಖ್ಯ ಸಲಹೆಗಾರ ಮತ್ತೊಮ್ಮೆ ಸುಳ್ಳು ಹೇಳುವ ಮೂಲಕ ಭಾರತವನ್ನು ಅಣಕಿಸಿದ್ದಾರೆ ಎಂದು ಪಕ್ಷದ ವಕ್ತಾರ ಶಹಜಾದ್ ಪೂನಾವಾಲಾ ಹೇಳಿದರು. ಕಾಂಗ್ರೆಸ್‌ನ ಸ್ಪಷ್ಟ ದುಷ್ಕೃತ್ಯಗಳ ನಂತರ, ಈಗ ಲಷ್ಕರ್-ಇ-ಕಾಂಗ್ರೆಸ್ ನ ಮುಖ್ಯ ಸಲಹೆಗಾರ ಸ್ಯಾಮ್ ಪಿತ್ರೋಡಾ ಆಗಮಿಸಿದ್ದಾರೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !