ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆ ನೇಮಕ ಮಾಡಿಕೊಂಡಿದ್ದ ಕೇರಳದ ನಾಲ್ವರು ಯುವಕರಲ್ಲಿ ಇಬ್ಬರು ಆದಷ್ಟು ಬೇಗ ಸ್ವದೇಶಕ್ಕೆ ಮರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಮುರುಳೀಧರನ್ ಅವರು ಮಂಗಳವಾರ ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುತ್ತಿದೆ. ಸದ್ಯದಲ್ಲೇ ಅವರು ವಾಪಸ್ಸಾಗಲಿದ್ದಾರೆ ಎಂದು ಹೇಳಿದರು.
ಇನ್ನಿಬ್ಬರನ್ನೂ ಕರೆತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ. ನಿಮ್ಮನ್ನು ಸ್ವದೇಶಕ್ಕೆ ಮರಳಿ ಕರೆತರಲು ದೃಢವಾದ ಕ್ರಮಗಳನ್ನು ಭಾರತ ತೆಗೆದುಕೊಳ್ಳುತ್ತಿದೆಎಂದು ಅವರಿಬ್ಬರಿಗೆ ಭರವಸೆ ನೀಡಲಾಗಿದೆ ಎಂದೂ ಹೇಳಿದ್ದಾರೆ.