ಹೊಸದಿಗಂತ ಡಿಜಿಟಲ್ ಡೆಸ್ಕ್ :
ಭಾರತ್ ಜೋಡೋ ಯಾತ್ರೆ’ ಇಂದು ಯಶಸ್ಸಿಗೆ ಭಾರತ ಸಹೋದರತ್ವ, ಏಕತೆ ಮತ್ತು ಗೌರವ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಂಜಾಬ್ ನ ಮುನ್ನಗುರುದ್ವಾರ ಫತೇಘರ್ ಸಾಹಿಬ್ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಧಿ, ಬಿಜೆಪಿಯು ದೇಶದಲ್ಲಿ ಭಯ ಮತ್ತು ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸಿದರು.
ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮವನ್ನು, ಒಂದು ಜಾತಿಯ ವಿರುದ್ಧ ಇನ್ನೊಂದು ಜಾತಿಯನ್ನು, ಒಂದು ಭಾಷೆಯ ವಿರುದ್ಧ ಇನ್ನೊಂದು ಭಾಷೆಯನ್ನು ಎತ್ತಿಕಟ್ಟಿ ದೇಶದಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಇದರಿಂದ ಭಾತೃತ್ವದ ವಾತಾವರಣ ಹಾಳಾಗುತ್ತಿದೆ ಎಂದರು.
ದೇಶದಲ್ಲಿ ಪ್ರೀತಿ, ಏಕತೆ, ಭ್ರಾತೃತ್ವದ ನೆಲೆಸಬೇಕು ಎಂಬ ಉದ್ದೇಶದಿಂದ ಈ ಯಾತ್ರೆ ಆರಂಭವಾಗಿದೆ. ಯಾತ್ರೆಗೆ ಅಪಾರ ಜನಸ್ಪಂದನೆ ವ್ಯಕ್ತವಾಗಿದೆ. ಒಂದು ರಾಜ್ಯಕ್ಕಿಂತ ಮತ್ತೊಂದು ರಾಜ್ಯದಲ್ಲಿ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದಿದ್ದಾರೆ.