ಭಾರತಕ್ಕೆ ಸರಣಿ ಗೆಲ್ಲುವ ತವಕ: ಟಾಸ್​ ಗೆದ್ದ ವೆಸ್ಟ್ ಇಂಡೀಸ್​ ಬೌಲಿಂಗ್​ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಹಾಗೂ ಆತಿಥೇಯ ವೆಸ್ಟ್ ಇಂಡೀಸ್ ನಡುವೆ ನಾಲ್ಕನೇ ಟಿ-20 ಪಂದ್ಯ ಆರಂಭಗೊಂಡಿದ್ದು, ಟಾಸ್​ ತೆದ್ದ ಕೆರಿಬಿಯನ್ ತಂಡ ಬೌಲಿಂಗ್ ಆಯ್ಕೆಮಾಡಿಕೊಂಡಿದೆ.

ಐದು ಟಿ-20 ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 2-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ, ಇಂದಿನ ಪಂದ್ಯದಲ್ಲಿ ಗೆಲುವು ದಾಖಲು ಮಾಡಿ ಸರಣಿ ಜಯಿಸುವ ತವಕದಲ್ಲಿದೆ.

ಇಂದಿನ ಪಂದ್ಯ ಕೆರಿಬಿಯನ್ ಪಾಲಿಗೆ ಮಾಡು ಇಲ್ಲವೆ ಮಡಿಯಾಗಿದ್ದು, ತಿರುಗೇಟು ನೀಡುವ ಹುಮ್ಮಸ್ಸಿನಲ್ಲಿದೆ. ಪಂದ್ಯ ಆರಂಭಗೊಳ್ಳುವುದಕ್ಕೂ ಸ್ವಲ್ಪ ಗಂಟೆ ಮುಂಚಿತವಾಗಿ ಮಳೆ ಸುರಿದ ಕಾರಣ, ಇಂದಿನ ಪಂದ್ಯ ಸಹ ಅರ್ಧಗಂಟೆ ತಡವಾಗಿ ಆರಂಭಗೊಂಡಿದೆ.

ಟೀಂ ಇಂಡಿಯಾ ಕೆಲವೊಂದು ಬದಲಾವಣೆ ಮಾಡಿದೆ. ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಅವಕಾಶ ಪಡೆದುಕೊಂಡಿದ್ದು, ಅರ್ಷದೀಪ್ ಸಿಂಗ್​​ಗೆ ಅವಕಾಶ ನೀಡಲಾಗಿದೆ. ಇಂದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಆರ್​. ಅಶ್ವಿನ್ ಹಾಗೂ ಶ್ರೇಯಸ್ ಅಯ್ಯರ್​ ಹೊರಗುಳಿದಿದ್ದಾರೆ.

ಟೀಂ ಇಂಡಿಯಾ: ರೋಹಿತ್ ಶರ್ಮಾ(ಕ್ಯಾಪ್ಟನ್), ಸೂರ್ಯಕುಮಾರ್ ಯಾದವ್​, ರಿಷಭ್ ಪಂತ್​(ವಿ.ಕೀ), ಸಂಜು ಸ್ಯಾಮ್ಸನ್​​, ದೀಪಕ್ ಹೂಡಾ, ದಿನೇಶ್ ಕಾರ್ತಿಕ್​, ಅಕ್ಸರ್ ಪಟೇಲ್, ಆವೇಶ್ ಖಾನ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್​

ವೆಸ್ಟ್ ಇಂಡೀಸ್ : ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ಕ್ಯಾಪ್ಟನ್​), ರೋವ್‌ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಡೆವೊನ್ ಥಾಮಸ್ (ವಿ.ಕೀ), ಜೇಸನ್ ಹೋಲ್ಡರ್, ಡೊಮಿನಿಕ್ ಡ್ರೇಕ್ಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!