ಶ್ರೀನಗರಕ್ಕೆ ನಾಲ್ಕು, ಲಡಾಖ್​ಗೆ 2 ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀನಗರಕ್ಕೆ ನಾಲ್ಕು ಹಾಗೂ ಲೇಹ್​ ಲಡಾಖ್​ಗೆ ಪ್ರಯಾಣಿಸಬೇಕಿದ್ದ ಎರಡು ವಿಮಾನಗಳು ಹವಾಮಾನ ವೈಪರೀತ್ಯದಿಂದ ಇಂಡಿಗೋ ಏರ್​ಲೈನ್ಸ್​ ತಕ್ಷಣವೇ ರದ್ದುಗೊಳಿಸಿದೆ .

ಈ ಕುರಿತಂತೆ ಇಂದು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪ್ರಕಟಿಸಿದೆ.ಹವಾಮಾನದಲ್ಲಿ ಉಂಟಾದ ಭಾರೀ ಬದಲಾವಣೆಯಿಂದ ಶ್ರೀನಗರ ಮತ್ತು ಲೇಹ್‌ನಲ್ಲಿ ರನ್‌ವೇಯನ್ನು ಮುಚ್ಚಲಾಗಿದ್ದು, ಪ್ರಯಾಣಿಕರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಇಂಡಿಗೋ ಸಂಸ್ಥೆ, ಎಲ್ಲರಿಗೂ ಉಪಹಾರಗಳನ್ನು ಕೊಟ್ಟಿದೆ. ಇದರೊಟ್ಟಿಗೆ ಪ್ರಯಾಣಿಕರಿಗೆ ಸಂಪೂರ್ಣ ಮರುಪಾವತಿ ನೀಡಿ, ಪರ್ಯಾಯ ವ್ಯವಸ್ಥೆ ಕೂಡ ಮಾಡಿದೆ ಎಂದಿದೆ. .

‘ನಮ್ಮ ಎಲ್ಲಾ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ’ ಎಂದ ಇಂಡಿಗೋ ಸಂಸ್ಥೆ, ಕಣಿವೆಯಲ್ಲಿ ಹಿಮಪಾತದಿಂದಾಗಿ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಭಾನುವಾರ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!