ರಾಜ್ಯ ಸಭೆಯಲ್ಲಿ ಅಶಿಸ್ತಿನ ವರ್ತನೆ: ಎಎಪಿಯ ಇಬ್ಬರು ಸೇರಿ ಮೂವರು ಸದಸ್ಯರು ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಪಕ್ಷೇತರ ಸಂಸದ ಅಜಿತ್‌ ಕುಮಾರ್‌ ಭುಯಾನ್‌ ಸಹಿತ ಆಮ್ ಆದ್ಮಿ ಪಕ್ಷದ ಸುಶೀಲ್‌ ಕುಮಾರ್‌ ಗುಪ್ತಾ ಹಾಗೂ ಸಂದೀಪ್‌ ಕುಮಾರ್‌ ಪಾಠಕ್‌ ಅವರನ್ನು ಈ ವಾರದ ಕಲಾಪದಿಂದ ಅಮಾನತುಗೊಳಿಸಿದೆ.
ತೀವ್ರ ಗದ್ದಲದ ನಡುವೆ ಮೊದಲ ಬಾರಿಗೆ ಸದನವನ್ನು ಮುಂದೂಡಿದ ನಂತರವೂ, ಪ್ರತಿಪಕ್ಷ ಸದಸ್ಯರು ಸದನದ ಬಾವಿಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.
ಫಲಕಗಳನ್ನು ಹಿಡಿದುಕೊಂಡು ಸದನದ ಬಾವಿಯಲ್ಲಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ಅವರು ಮೂವರು ಸದಸ್ಯರನ್ನುಅಮಾನತು ಗೊಳಿಸಿದರು.
ಅಶಿಸ್ತಿನ ನಡವಳಿಕೆಗಾಗಿಗಾಗಿ ಇದುವರೆಗೆ 23 ವಿರೋಧ ಪಕ್ಷದ ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!