ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ನಲ್ಲಿ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈಗಾಗಲೇ ಸರಣಿ ಸಭೆಗಳನ್ನು ನಡೆಸುತ್ತಿದೆ.
ಇಂದು ಸಹ ಪ್ರಧಾನಿ ಮೋದಿ ಭದ್ರತೆಗೆ ಸಂಬಂಧಿಸಿದಂತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಈ ನಡುವೆ ರಷ್ಯಾ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ ದಿಢೀರ್ ರದ್ದುಗೊಳಿಸಿದ್ದಾರೆ.
ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ವಿರುದ್ಧದ ವಿಜಯದ 80 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ ವಿಜಯ ದಿನಾಚರಣೆ ಅಂಗವಾಗಿ ಅತಿಥಿಯಾಗಿ ಭಾಗಿಯಾಗಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿತ್ತು. ಮೇ.09 ರಂದು ಮೋದಿ ರಷ್ಯಾಗೆ ತೆರಳಬೇಕಿತ್ತು ಆದರೆ ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವುದರಿಂದ ಮೋದಿ ರಷ್ಯಾ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ್ದಾರೆ.
‘ಭಾರತದ ನಾಯಕ ಮೋದಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ, ಭಾರತವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸಲಾಗುವುದಿಲ್ಲ’ ಭಾರತವನ್ನು ಬೇರೆ ಮಟ್ಟದಲ್ಲಿ ಪ್ರತಿನಿಧಿಸಲಾಗುವುದು ಎಂದು ರಷ್ಯಾ ಹೇಳಿರುವುದನ್ನು ಸುದ್ದಿ ಸಂಸ್ಥೆ TASS ವರದಿ ಮಾಡಿದೆ.