ಹೊಸದಿಗಂತ ವರದಿ, ವಿಜಯಪುರ:
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದ ಕ್ರಾಸ್ ಬಳಿ ಇನ್ನೋವಾ ಕಾರು ಬೈಕ್ಗೆ ಡಿಕ್ಕಿ ಹೊಡೆದು ಕಾಲುವೆ ಡಿವೈಡರ್ ಗೆ ಡಿಕ್ಕಿಯಾಗಿ ಓರ್ವ ಸಾವಿಗೀಡಾದ ಘಟನೆ ನಡೆದಿದೆ.
ಹುಣಸಗಿ ತಾಲೂಕಿನ ಚನ್ನೂರ ಗ್ರಾಮದ ಬಸವಂತ್ರಾಯಗೌಡ ಶಾಂತಗೌಡ ಪಾಟೀಲ (59) ಎನ್ನುವರು ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಚಾಲಕ ಸೇರಿ ಮೂರು ಜನರಿಗೆ ಗಾಯವಾಗಿದ್ದು, ಹುಣಸಗಿಯಿಂದ ಬಸವನಬಾಗೇವಾಡಿ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ನಡೆದಿದೆ.
ಮನಗೂಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ