ACCIDENT | ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ವ್ಯಕ್ತಿಗಳ ದುರ್ಮರಣ

ಹೊಸದಿಗಂತ ವರದಿ ಚಿತ್ರದುರ್ಗ: 

ಇನ್ನೋವಾ ಕಾರಿನ ಟೈರ್ ಸ್ಫೋಟವಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂರು ಜನ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ನಗರದ ಹೊರವಲಯದ ಸೀಬಾರ ಬಳಿಯ ಗೋಶಾಲೆ ಮುಂದಿನ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಅರ್ಜುನ್ (28) , ಸರವಣ (30),  ಶ್ರೀಧರ್ (30)  ಎಂದು ಗುರುತಿಸಲಾಗಿದೆ. ಮೃತ ಅರ್ಜುನ್ ಚೆನೈನ ಅಶೋಕನಗರ ಪೋಲಿಸ್ ಠಾಣೆಯ ಪೇದೆ ಎನ್ನಲಾಗಿದೆ. ಇವರೆಲ್ಲರೂ ತಮಿಳುನಾಡಿನ ಕೃಷ್ಣಗಿರಿಯವರು ಎಂದು ತಿಳಿದುಬಂದಿದೆ. ಪ್ರವಾಸಕ್ಕೆಂದು ಗೋವಾಗೆ ತೆರಳುವಾಗ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಇತರೆ 6 ಜನರಿಗೆ ತೀವ್ರ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!