ಅಂಬೇಡ್ಕರ್ ಪ್ರತಿಮೆಗೆ ಅವಮಾನ: ತಪ್ಪಿತಸ್ಥರನ್ನು ಕೂಡಲೇ ಬಂಧಿಸಲಾಗುವುದು ಎಂದ ಕಮಿಷನರ್  

ಹೊಸದಿಗಂತ ವರದಿ, ಕಲಬುರಗಿ :

ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸದರಿ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ನಗರ ಪೋಲಿಸ್ ಆಯುಕ್ತ ಚೇತನ್ ಆರ್ ತಿಳಿಸಿದರು.

ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಕರಣವನ್ನು ಆದಷ್ಟು ಬೇಗನೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಲಾಗುವುದು. ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿ ಇಡೀ ದೇಶದ ಶೋಷಿತ ಸಮುದಾಯಗಳಿಗೆ ಬದುಕುವ ಹಕ್ಕನ್ನು ಕೊಟ್ಟ ಮಹಾತ್ಮನಿಗೂ ಅಪಮಾನ ಮಾಡಿದವರಿಗೆ ತಕ್ಕ ಶಿಕ್ಷೆ ನೀಡುವ ಕೆಲಸವನ್ನು ನಾವು ಖಂಡಿತ ಮಾಡಲಿದ್ದೇವೆ.

ಸಾರ್ವಜನಿಕರು ಉದ್ವೇಗಕ್ಕೆ ಒಳಗಾಗದೇ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಕಲಬುರಗಿ ನಗರ ಪೊಲೀಸ್ ವತಿಯಿಂದ ಕೋರಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!