ಚಂದ್ರಯಾನ 3 ಗೆ ಅವಮಾನ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಂದ್ರಯಾನ 3 (Chandrayaan 3) ಕುರಿತು ನಟ ಪ್ರಕಾಶ್ ರಾಜ್ (Prakash Raj)ಮಾಡಿದ ವ್ಯಂಗ್ಯ ಇದೀಗ ಸಂಕಷ್ಟ ತಂದಿಟ್ಟಿದ್ದು, ಚಂದ್ರಯಾನ ಮತ್ತು ಭಾರತೀಯ ವಿಜ್ಞಾನಿಗಳನ್ನು ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ (Banahatti) ಪೊಲೀಸ್ ಠಾಣೆಯಲ್ಲಿ ದೂರು (Complaint) ದಾಖಲಾಗಿದೆ.

ಹಿಂದು ಸಂಘಟನೆ ಮುಖಂಡ ನಂದು ಗಾಯಕವಾಡ ಹಾಗೂ ಇತರರಿಂದ ದೂರು ಸಲ್ಲಿಸಿದ್ದಾರೆ.

ನಮ್ಮ ಹೆಮ್ಮೆಯ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಫೋಸ್ಟ್ ಮಾಡಿ ಪ್ರಕಾಶ್ ರಾಜ್ ತಮ್ಮ ವಿಕೃತಿ ಮೆರೆದಿದ್ದಾರೆ. ಅವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನ ಬಂಧಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇಸ್ರೋ ಕಳುಹಿಸಿರುವ ಚಂದ್ರಯಾನ‌ ನೌಕೆಯಿಂದ ಭಾರತದ ಶಕ್ತಿಯನ್ನು ಇಮ್ಮಡಿಗೊಳಿಸಿದ್ದಾರೆ. ಈ ಬಗ್ಗೆ ನಮ್ಮ ವಿಜ್ಞಾನಿಗಳನ್ನ ಎಲ್ಲರೂ ಹೊಗಳುತ್ತಿರುವಾಗ. ಪ್ರಕಾಶ್ ರಾಜ್ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ. ಅವರ ವಿರುದ್ದ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!