ವಂದೇ ಮಾತರಂ ಗೀತೆಗೆ ಅವಮಾನ: ಸಿದ್ಧರಾಮಯ್ಯ ಕ್ಷಮೆ ಕೇಳುವಂತೆ ಬಿಜೆಪಿ ಒತ್ತಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸಿದ್ಧರಾಮಯ್ಯ ಅವರು ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು ಎಂಬುದಾಗಿ ಬಿಜೆಪಿ ಒತ್ತಾಯಿಸಿದೆ.

 

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಬಿಜೆಪಿ, ಈ ದೇಶದಲ್ಲಿ ಎಲ್ಲ ಧರ್ಮೀಯರು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡಿರುವ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವುದು ಅವರ ಜಿಹಾದಿ ಮನಸ್ಥಿತಿ ತೋರಿಸುತ್ತದೆ. ಬ್ರಿಟಿಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದರು, ಈಗ ಅದೇ ಸಾಲಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರ್ಪಡೆಯಾಗಿದ್ದಾರೆ ಎಂದಿದೆ.

ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿರುವುದು, ಅವರಿಗೆ ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜ ಒಡೆಯುವುದೇ ಮುಖ್ಯ ಎನ್ನುವುದನ್ನು ತೋರಿಸುತ್ತದೆ ಎಂದು ವಾಗ್ಧಾಳಿ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!