ಸೋತ ಬಿಜೆಪಿ ಪ್ರಮುಖ ಸಚಿವರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಹಂಗಾಮಿ ಸಿಎಂ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ.

ಅದ್ರಲ್ಲೂ ಬಿಜೆಪಿಯ ಘಟಾನುಘಟಿ ನಾಯಕರುಗಳು ಈ ಬಾರಿ ಸೋಲುಕಂಡಿದ್ದಾರೆ. ಶ್ರೀರಾಮು, ಮುರುಗೇಶ್ ನಿರಾಣಿ, ಗೋವಿಂದ್​ ಕಾರಜೋಳ, ವಿ ಸೋಮಣ್ಣ ಹಾಗೂ ಡಾ ಕೆ ಸುಧಾಕರ್​ ಸೇರಿದಂತೆ ಪ್ರಮುಖ ನಾಯಕರು ಪರಾಭವಗೊಂಡಿದ್ದಾರೆ.

ಇದೀಗ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಸೋತ ಪ್ರಮುಖ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ಹೇಳುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇಂದು (ಮೇ 16) ಬೆಂಗಳೂರಿನ ಸದಾಶಿವನಗರದಲ್ಲಿರುವ ಸುಧಾಕರ್ ಮನೆ ಭೇಟಿ ನೀಡಿ ಸಮಾಧಾನದ ಜೊತೆಗೆ ಧೈರ್ಯ ಹೇಳಿದರು. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇಂದು ಸುಧಾಕರ್ ಭೇಟಿ ಮಾಡಿದ್ದೇನೆ. ಸೋಮಣ್ಣನವರನ್ನೂ ಭೇಟಿ ಮಾಡುತ್ತೇನೆ, ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದು, ಅವರೆಲ್ಲರ ಮನೆಗೆ ಭೇಟಿ ನೀಡಿ ಧೈರ್ಯತುಂಬುವ ಕೆಲಸ ಮಾಡುತ್ತಿದ್ದೇನೆ.ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಏಕಾಯ್ತು , ಏನು ಅಂತ ಪರಾಮರ್ಶೆ ಮಾಡಿದ್ದೇವೆ ಎಂದರು.

ಸುಧಾಕರ್ ಭೇಟಿ ಬಳಿಕ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೂ ತೆರಳಿದ್ದಾರೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸಕ್ಕೆ ಭೇಟಿ ನೀಡಿದರು. ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!