ಹೊಸದಿಗಂತ ಡಿಜಿಟಲ್ ಡೆಸ್ಕ್
ತುಮಕೂರು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಇಂದು ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಅಭಿವೃದ್ದಿ ದೃಷ್ಟಿ ಹಿನ್ನೆಲೆ ಮತ್ತೊಂದು ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಹೇಳಿದರು.ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಕೂಡ ಸಿಗಲಿದೆ ಎಂದು ಹೇಳಿದರು.