ಹೊಸದಿಗಂತ ವರದಿ ತುಮಕೂರು:
ತುಮಕೂರು-ಶಿರಾ ನಡುವೆ ಮುಂದಿನ ಹತ್ತು ವರ್ಷಗಳ ಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.
ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಾಗಾರಕ್ಕೆ ಚಾಲನೆ ನೀಡಲು ತುಮಕೂರಿಗೆ ಆಗಮಿಸಿದ್ದ ಅವರು
ಸುದ್ದಿಗಾರರೊಂದಿಗೆ ಮಾತನಾಡಿ ರಾಜಧಾನಿ ಬೆಂಗಳೂರು ಬಿಟ್ಟರೆ ಅಂತರಾಷ್ಟ್ರೀಯ ಬಹುರಾಷ್ಟ್ರೀಯ ಕಂಪನಿಗಳು ಹೂಡಿಕೆಗೆ ತುಮಕೂರನ್ನೆ ಆಯ್ಕೆ ಮಾಡಿಕೊಳ್ಳುತ್ತಿವೆ. ಮುಂಬೈ ಚೆನ್ನೈ ಇಂಡಸ್ಟ್ರಿಯಲ್ ಕಾರಿಡಾರ್ ಇದೇ ಮಾರ್ಗದಲ್ಲಿ ಹಾದುಹೋಗಿದ್ದು, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದ ಒತ್ತಡ ಕಡಿಮೆ ಮಾಡಲು, ಉದ್ದಿಮೆ ದಾರರಿಗೆ ಅನುಕೂಲ ವಾಗುವಂತೆ ತುಮಕೂರು ವಸಂತ ನರಸಾಪುರ ಭಾಗದಲ್ಲಿ ವಿಮಾನ ನಿಲ್ದಾಣ ತಲೆ ಎತ್ತಲಿದೆ ಎಂದರು.
ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯ ದಲ್ಲಿ ನಾಯಕತ್ವ ಬದಲಾಗುತ್ತದೆ ಎಂಬುದು ಬರೀ ವದಂತಿಯಷ್ಟೇ. 2023 ರ ಚುನಾವಣೆಯವರೆಗೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯುವರು ಎಂದರು.
ರಾಷ್ಟ್ರ ಪತಿ ಚುನಾವಣೆ ಸಂಬಂಧ ಎನ್ ಡಿಎ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಜತೆಯಲ್ಲಿ ರುವ ಸಲುವಾಗಿ ಮುಖ್ಯಮಂತ್ರಿಗಳು ದೆಹಲಿಗೆ ಪ್ರಯಾಣ ಬೆಳೆ ಸುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.