ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ, ಮಾಗಡಿ ಕೋಟೆ ಸಂರಕ್ಷಣೆ :ಅಶ್ವತ್ಥನಾರಾಯಣ

ಹೊಸದಿಗಂತ ವರದಿ ರಾಮನಗರ:

ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂಪಾಯಿ ನಗದು ಸಹಿತ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುವುದು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಮಾಗಡಿ ಕೋಟೆಯಲ್ಲಿ ಇಂದು ಏರ್ಪಡಿಸಿದ್ದ ಕೆಂಪೇಗೌಡರ 513ನೇ ಜಯಂತೋತ್ಸವದಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿಸಿರುವ ಇಲ್ಲಿನ ಐತಿಹಾಸಿಕ ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿ ಸಂರಕ್ಷಿಸಲಾಗುವುದು ಎಂದು ಭರವಸೆ ನೀಡಿದರು.

ಕೆಂಪೇಗೌಡರ ವೀರ ಸಮಾಧಿ ಇರುವ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿ ಪರಂಪರೆ ಸಂರಕ್ಷಣೆಯನ್ನು ಸರ್ಕಾರ ಮಾಡುತ್ತಿದೆ. ಜೊತೆಗೆ ನಾಡುಪ್ರಭುವಿಗೆ ಸೇರಿದ ಸಾವನದುರ್ಗ, ಹುಲಿಯೂರು ದುರ್ಗ ಮುಂತಾದ ಸ್ಥಳಗಳನ್ನು ಕೂಡಾ ಆಕರ್ಷಕವಾಗಿ ಅಭಿವೃದ್ಧಿ ಮಾಡಲಾಗುವುದು ಜೊತೆಗೆ ಇದೇ 27 ರಂದು ಕೆಂಪೇಗೌಡರ ಜಯಂತಿಯನ್ನು ವಿಧಾನಸೌಧದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!