ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜ.20 ರಿಂದ 22 ರವರೆಗೆ ಮೂರು ದಿನಗಳ ಕಾಲ ಬೆಂಗಳೂರು ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ನಡೆಯಲಿದ್ದು, ಸಿರಿಧಾನ್ಯ ಬೆಳೆಯುವ, ರೈತರಿಗೆ ಮಾರುಕಟ್ಟೆ ಒದಗಿಸುವ ಹಾಗೂ ರೈತರನ್ನು ಪ್ರೋತ್ಸಾಹಿಸುವ ಸದುದ್ದೇಶದೊಂದಿಗೆ ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ.
ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರತಿನಿಧಿಗಳು ಮೇಳದಲ್ಲಿ ಭಾಗವಹಿಸಲಿದ್ದಾರೆ. ಕೃಷಿ ಇಲಾಖೆಯು ಕೆಎಪಿಪಿಇಸಿ ಮತ್ತು ಐಸಿಸಿಒಎ ಸಂಸ್ಥೆಗಳ ಸಹಯೋಗದೊಂದಿಗೆ , ಸಿರಿಧಾನ್ಯ ಬೆಳೆಯುವ, ರೈತರಿಗೆ ಮಾರುಕಟ್ಟೆ ಒದಗಿಸುವ ಹಾಗೂ ರೈತರನ್ನು ಪ್ರೋತ್ಸಾಹಿಸುವ ಸದುದ್ದೇಶದೊಂದಿಗೆ ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿರಿಧಾನ್ಯ ಮೇಳವನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ಶೋಭಾ ಕರಂದ್ಲಾಜೆ, ಕೈಲಾಶ್ ಚೌಧರಿ, ರಾಜೀವ್ ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಉತ್ಸುವಾರಿ ವಹಿಸಲಿದ್ದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.