ಇಂದಿನಿಂದ ಧಾರವಾಡದಲ್ಲಿ ಅಂತಾರಾಷ್ಟ್ರೀಯ ಯುವಜನೋತ್ಸವ : ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಯ್ತು ವಿದ್ಯಾಕಾಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಐದು ದಿನಗಳ ಕಾಲ ವಿದ್ಯಾಕಾಶಿ ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು, ಕಾರ್ಯಕ್ರಮದ ಆರಂಭಕ್ಕೆ ಕ್ಷಣಗಣನೆ ಎಣಿಸಲಾಗಿದೆ. ಈ ಬಾರಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರಧಾನಿ ಮೋದಿ ಆಗಮನಕ್ಕೆ ಧಾರವಾಡ ಭಾರೀ ಸಜ್ಜಾಗಿದ್ದು, ಇಡೀ ನಗರವೇ ಝಗಮಗಿಸುತ್ತಿದೆ.

ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ವಿವಿಧ ಸ್ಥಳಗಳಿಂದ ಒಟ್ಟಾರೆ 7500 ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಧಾರವಾಡ ಕೃಷಿ ವಿವಿ, ಕರ್ನಾಟಕ ವಿವಿ ಹಾಗೂ ಕೆಸಿಡಿಯಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದ್ದು, ಅದ್ಧೂರಿ ವೇದಿಕೆ ಸಿದ್ಧಪಡಿಸಲಾಗಿದೆ.

ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ರೋಡ್ ಶೋ ನಡೆಯಲಿದೆ. ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಯುವಸಮೂಹವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!