ಮಂಗಳೂರಿನ ಕುಕ್ಕರ್ ಸ್ಫೋಟ ಪ್ರಕರಣದ ತನಿಖೆ ತ್ವರಿತಗತಿಯಲ್ಲಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ನಾಗುರಿ ಪರಿಸರದಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣ ಸಂಬಂಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿ ಘಟನೆ ಖಂಡಿಸಿರುವ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೆ ಮುಂದುವರಿಸಿ, ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಟ್ವಿಟ್ ಮೂಲಕ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!