ಹೂಡಿಕೆದಾರರ ಸಮಾವೇಶ: ಅಮೆರಿಕಾದ ಭಾರತೀಯ ರಾಯಭಾರಿಗೆ ಸಚಿವ ನಿರಾಣಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ, ಅಂತಾರಾಷ್ಟ್ರೀಯ ರೋಡ್ ಶೋ ಕೈಗೊಂಡಿರುವ ಬೃಹತ್ ಮತ್ತು‌ ಮಧ್ಯಮ‌ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಅವರು ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತರಣಜೀತ್ ಸಿಂಗ್ ಸಂಧು ಅವರನ್ನು ಗುರುವಾರ ಸಂಜೆ ವಾಷಿಂಗ್ಟನ್‌ನಲ್ಲಿ ಭೇಟಿಯಾಗಿ, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ವಿವರಿಸಿದರು.

ಇದರ ಜೊತೆಗೆ ಬೆಂಗಳೂರು ಅರಮನೆಯಲ್ಲಿ ನವೆಂಬರ್ 2-4ರ ವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು‌ ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ ರಮಣರೆಡ್ಡಿ ಹಾಗೂ ಇತರ ಅಧಿಕಾರಿಗಳನ್ನು ಉಪಸ್ಥಿತಿರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!