IPL 2024 | ಬೆಂಗಳೂರು, ಕೋಲ್ಕತಾ ಮುಖಾಮುಖಿ: ಟಾಸ್ ಗೆದ್ದ ಅಯ್ಯರ್ ಟೀಮ್ ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಪಂದ್ಯಕ್ಕೆಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅನುಕೂಲ್ ರಾಯ್ ತಂಡ ಕೂಡಿಕೊಂಡಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂಜಾಬ್ ಕಿಂಗ್ಸ್ ಎದುರು ಕಣಕ್ಕಿಳಿದ ತಂಡವೇ ಕೆಕೆಆರ್ ಎದುರಿನ ಪಂದ್ಯಕ್ಕೆ ಕಣಕ್ಕಿಳಿದಿದೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!