ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪಿಎಸ್ಐ ಮಂಜುನಾಥ್ ಹಾಗೂ ಕಾನ್ಸ್ಟೆಬಲ್ ರಮೇಶ್ ಅವರನ್ನು ಬಂಧಿಸಿದ್ದಾರೆ.
ಐಪಿಎಲ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಹಣದ ಬೇಡಿಕೆಯ ಮೇರೆಗೆ ಪಿಎಸ್ಐ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ ಎಂದು ಲೋಕಾಯುಕ್ತದ ಉನ್ನತ ಮೂಲಗಳು ತಿಳಿಸಿವೆ. ಫಾರೂಖ್ ಎಂಬಾತನ ಬಳಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ.
ಫಾರೂಖ್ ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಪಿಎಸ್ ಐ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ. ಮುಂಗಡ ಪಾವತಿಯಲ್ಲಿ 1 ಲಕ್ಷ ರೂ. ಹಣ ಪಡೆದು, ನಂತರ 70,000 ರೂ. ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ಫಾರೂಖ್ ಹೇಳಿದ್ದಾರೆ.
ಇಂದು ಕಾನ್ ಸ್ಟೇಬಲ್ ರಮೇಶ್ ಬಳಿ 50 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಅವರು ಕೂಡ ಲೋಕಾ ಬಲೆಗೆ ಬಿದಿದ್ದಾರೆ. ವಿಚಾರಣೆ ವೇಳೆ ಪಿಎಸ್ ಐ ಮಂಜುನಾಥ್ ವಿರುದ್ಧವೂ ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಲೋಕಾ ಪೊಲೀಸರು ಬಂಧಿಸಿದ್ದಾರೆ.