July 21, 2026
Tuesday, July 21, 2026
spot_img

ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ: ಹರಿಯಾಣ ಡಿಜಿಪಿ ವಿರುದ್ಧ ಪತ್ನಿ ದೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಂಡೀಗಢದಲ್ಲಿ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಸಂಬಂಧ ಪೂರಣ್ ಪತ್ನಿ ಹರಿಯಾಣ ಡಿಜಿಪಿ ವಿರುದ್ಧ ದೂರು ದಾಖಲಿಸಿದ್ದಾರೆ.

ಚಂಡೀಗಢ ಪೊಲೀಸರು ಪೂರಣ್ ಕುಮಾರ್ ನಿವಾಸದಿಂದ 9 ಪುಟಗಳ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ, ಇದರಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಹೆಸರು ಉಲ್ಲೇಖಿಸಲಾಗಿದೆ.

ಪೂರಣ್ ಕುಮಾರ್ 2001 ರ ಬ್ಯಾಚ್ ಐಪಿಎಸ್ ಅಧಿಕಾರಿ. ಅವರನ್ನು ಕೇವಲ 9 ದಿನಗಳ ಹಿಂದೆಯಷ್ಟೇ ಪಿಟಿಸಿ ಸುನಾರಿಯಾ ಐಜಿಯಾಗಿ ನೇಮಿಸಲಾಗಿತ್ತು.

ಇದೀಗ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ, ಅವರ ಪತ್ನಿ ಐಎಎಸ್ ಅಮ್ನೀತ್ ಪಿ. ಕುಮಾರ್ ಅವರು ಹರಿಯಾಣ ಡಿಜಿಪಿ ಮತ್ತು ರೋಹ್ಟಕ್ ಎಸ್ಪಿ ವಿರುದ್ಧ ಚಂಡೀಗಢ ಪೊಲೀಸರಿಗೆ ದೂರು ನೀಡಿದ್ದಾರೆ. ನಾಲ್ಕು ಪುಟಗಳ ದೂರಿನಲ್ಲಿ, ಹರಿಯಾಣ ಡಿಜಿಪಿ ಶತ್ರುಜೀತ್ ಸಿಂಗ್ ಕಪೂರ್ ಮತ್ತು ರೋಹ್ಟಕ್ ಎಸ್ಪಿ ನರೇಂದ್ರ ಬಿಜಾರ್ನಿಯಾ ಅವರು ತಮ್ಮ ಪತಿಗೆ ಕಿರುಕುಳ, ತಾರತಮ್ಯ ಮತ್ತು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ತನ್ನ ಪತಿಯ ಸಾವಿಗೆ ಸ್ವಲ್ಪ ಮೊದಲು ಡಿಜಿಪಿ ಶತ್ರುಜೀತ್ ಕಪೂರ್ ಅವರ ಆದೇಶದ ಮೇರೆಗೆ ರೋಹ್ಟಕ್‌ನಲ್ಲಿ ತಮ್ಮ ವಿರುದ್ಧ ಸುಳ್ಳು ಪ್ರಕರಣ (ಎಫ್‌ಐಆರ್-ಸಂಖ್ಯೆ 0319/2025) ದಾಖಲಿಸಲಾಗಿದೆ, ಇದು ಉದ್ದೇಶಪೂರ್ವಕ ಪಿತೂರಿ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದು ಅವರ ಪತಿ ತೀವ್ರ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

ವೈ ಪೂರಣ್ ಕುಮಾರ್ ಚಂಡೀಗಢದ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !