SHOCKING | ಛತ್ತೀಸ್‌ಗಢದಲ್ಲಿ ಕಾರ್‌ಗೆ ಡಿಕ್ಕಿ ಹೊಡೆದ ಕಬ್ಬಿಣ ತುಂಬಿದ ಟ್ರಕ್, ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಬ್ಬಿಣ ತುಂಬಿದ ಟ್ರಕ್ ಒಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರ್‌ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಛತ್ತೀಸ್‌ಗಢದ ಬಲೋದ್‌ನಲ್ಲಿ ಅಪಘಾತ ಸಂಭವಿಸಿದೆ. ಸಿಮ್ರನ್ ಸಲೂಜಾ ಹಾಗೂ ಅವರ ಪುತ್ರಿ ಮೃತರು ಎನ್ನುವ ಮಾಹಿತಿ ದೊರೆತಿದೆ, ಕಾರು ಚಾಲಕ ಹಾಗೂ ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.

ತಾಯಿ ಮಗಳು ಕಾರ್‌ನಲ್ಲಿ ರಾಯ್‌ಪುರಕ್ಕೆ ತೆರಳುತ್ತಿದ್ದರು, ಈ ವೇಳೆ ಕಾರ್ ಕೆಟ್ಟಿತ್ತು, ಬಾಡಿಗೆ ಕಾರ್ ಮಾಡಿಕೊಂಡು ಪ್ರಯಾಣ ಬೆಳೆಸಿದ್ದು, ಈ ಕಾರ್‌ಗೆ ಟ್ರಕ್ ಡಿಕ್ಕಿಯಾಗಿದೆ.

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್ ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾರೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!