ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯನವರು ಪದೇ ಪದೇ ಮೋದಿಯವರ ವಿರುದ್ಧ ಮಾತನಾಡುತ್ತಾರೆ. ಅವರನ್ನು ಟೀಕಿಸುತ್ತಾರೆ. ಇದೆಷ್ಟು ಸರಿ? ಬಿ.ಎಸ್.ಯಡಿಯೂರಪ್ಪನವರು ರೈತರ ಪರ ಬಜೆಟ್ ಮಂಡಿಸಿದ್ದರು. ಅವರನ್ನು ಈಗಲೂ ರೈತರು ನೆನೆಪಿಸಿಕೊಳ್ಳುತ್ತಾರೆ. ಸಿದ್ದರಾಮಯ್ಯನವರೇ ನಿಮ್ಮನ್ನು ಯಾವ ಕಾರಣಕ್ಕಾಗಿ ಜನ ನೆನಪಿಸುತ್ತಾರೆ ಎಂದು ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಪಾಕಿಸ್ತಾನದ ಬಜೆಟ್ ಅಥವಾ ಕರ್ನಾಟಕದ ಬಜೆಟ್ ಎಂಬುದರ ಬಗ್ಗೆ ಅನುಮಾನ ಮೂಡುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಂಡಿದ್ದಾರೆ. ಮುಂದಿನ ಮೂರು ವರ್ಷ ನಿರಂತರವಾಗಿ ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ನಡೆಸಿ, ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದರು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಸಾಮಾಜಿಕ, ಆರ್ಥಿಕ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ₹38 ಸಾವಿರ ಕೋಟಿ ಅನುದಾನ ದುರುಪಯೋಗ ಮಾಡಿದ್ದಾರೆ. ಬಿಜೆಪಿ ವಿರೋಧ ಪಕ್ಷವಾಗಿ ಸರ್ಕಾರದ ಜವಾಬ್ದಾರಿ ನೆನಪಿಸಲು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದೆ ಎಂದು ಹೇಳಿದ್ದಾರೆ.