ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಮ್ಆದ್ಮಿ ಪಕ್ಷದ ಸಂಸದ ದೃಷ್ಟಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದಾಗಿನಿಂದ ರಾಘವ್ ಚಡ್ಡಾ ಪತ್ತೆಯಿಲ್ಲ ಎಂದು ಪಕ್ಷೇತರರು ಮಾತನಾಡಿದ್ದರು. ರಾಘವ್ ಕಣ್ಣಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು ಬ್ರಿಟನ್ನಲ್ಲಿದ್ದಾರೆ ಎಂದು ಸೌರಭ್ ಹೇಳಿದ್ದಾರೆ.
ರಾಘವ್ ದೃಷ್ಟಿಯಲ್ಲಿ ಸ್ವಲ್ಪ ಸಮಸ್ಯೆ ಇದೆ, ರೆಟಿನಾ ಡಿಟ್ಯಾಚ್ಮೆಂಟ್ ತುಂಬಾ ಗಂಭೀರ ಕಾಯಿಲೆಯಾಗಿದ್ದು, ಅವರು ದೃಷ್ಟಿಯನ್ನು ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅದಕ್ಕಾಗಿಯೇ ಅವರು ಚಿಕಿತ್ಸೆಗಾಗಿ ಅಲ್ಲಿಗೆ ಹೋಗಿದ್ದಾರೆ. ಶೀಘ್ರವೇ ಗುಣಮುಖರಾಗಿ ವಾಪಾಸಾಗಲಿ ಎಂದು ಆಶಿಸೋಣ ಎಂದಿದ್ದಾರೆ.