ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬದ ನಂತರ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಊಹೆ ಕಡೆಗೂ ಸುಳ್ಳಾಗಿದೆ.
ಏಪ್ರಿಲ್ನಲ್ಲಿ ಮಳೆಯಾಗಲಿದೆ ಎಂದು ಕಾದು ಕೂತಿದ್ದ ಜನತೆಗೆ ಹವಾಮಾನ ಇಲಾಖೆ ಕಹಿ ಸುದ್ದಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ನಲ್ಲಿ ಮಳೆಯಾಗೋದಿಲ್ಲ, ಮೇನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಏಪ್ರಿಲ್ ಮಳೆಯ ಕನಸು ಕನಸಾಗಿಯೇ ಉಳಿದಿದೆ.
ಹವಾಮಾನ ಇಲಾಖೆಯ ನೂತನ ವರದಿಯನ್ವಯ ಮುಂದಿನ 10 ದಿನಗಳ ಕಾಲ ರಾಜ್ಯದ ಘಟ್ಟ ಪ್ರದೇಶಗಳನ್ನು ಹೊರತು ಪಡಿಸಿ ಬೆಂಗಳೂರು ಮತ್ತು ಕರ್ನಾಟಕದ ಇತರೆ ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆ ಎಂದು ಹೇಳಿದೆ.
ಪ್ರಮುಖ ಜಾಗತಿಕ ಸಂಖ್ಯಾತ್ಮಕ ಹವಾಮಾನ ಮುನ್ಸೂಚನಾ ಸಂಸ್ಥೆಗಳಾದ ಮಧ್ಯಮ-ಶ್ರೇಣಿಯ ಹವಾಮಾನ ಮುನ್ಸೂಚನೆಗಳ ಯುರೋಪಿಯನ್ ಕೇಂದ್ರ (ECMWF) ಮತ್ತು ಜಾಗತಿಕ ಮುನ್ಸೂಚನೆ ವ್ಯವಸ್ಥೆ (GFS) ಈ ವರದಿ ನೀಡಿದ್ದು, ‘ಸಂಚಿತ ಮಳೆಯು ಮುಂದಿನ 10 ದಿನಗಳಲ್ಲಿ ಘಟ್ಟಗಳನ್ನು ಹೊರತುಪಡಿಸಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಯಾವುದೇ ರೀತಿಯ ಮಳೆ ಸಾಧ್ಯತೆ ಕಡಿಮೆ ಎಂದು ಹೇಳಿದೆ.