ಬಿಸಿ ಮುಟ್ಟಿಸಲಿದೆಯೇ ಬಸ್ ಟಿಕೇಟ್? ಏನಂತ ಹೇಳಿದ್ರು ರಾಮಲಿಂಗಾರೆಡ್ಡಿ??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬಸ್‌ ಟಿಕೆಟ್‌ ದರ ಏರಿಕೆಯಾಗಿದ್ದು, ಸಾಮಾನ್ಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ.

ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ. ಬಿಎಂಟಿಸಿ ಬಸ್ ದರಗಳನ್ನು 2014ರಲ್ಲಿ ಮತ್ತು ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿಯ ದರಗಳನ್ನು 2020ರಲ್ಲಿ ಪರಿಷ್ಕರಿಸಲಾಯಿತು. ದರ ಪರಿಷ್ಕರಣೆ ನಂತರ ಡೀಸೆಲ್ ಮತ್ತು ಬಿಡಿಭಾಗಗಳ ಬೆಲೆಗಳು ಏರಿಕೆಯಾಗಿವೆ. ಜತೆಗೆ ಸಿಬ್ಬಂದಿ ವೇತನವೂ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!