Thursday, November 20, 2025

ಸರ್ಕಾರಿ ಡಾಕ್ಟರ್ ಸಾವಿಗೆ ರಾಜಕೀಯ ನಂಟು? ಆತ್ಮಹತ್ಯೆ ಕೇಸ್​ನಲ್ಲಿ ಭಾರೀ ತಿರುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ 26 ವರ್ಷದ ಯುವ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದಲ್ಲಿಯೇ ಚರ್ಚೆಗೆ ಕಾರಣವಾಗಿದೆ. ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅವರು ತಮ್ಮ ಅಂಗೈಯಲ್ಲಿ ಬರೆದಿದ್ದಾರೆ. ಆರೋಪಿಗಳು ನಕಲಿ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನೀಡುವಂತೆ ತನ್ನ ಮೇಲೆ ಒತ್ತಡ ಹೇರಲಾಗಿತ್ತು. ಇದಕ್ಕೆ ಒಪ್ಪದಾಗ ನನಗೆ ಕಿರುಕುಳ ನೀಡುತ್ತಿದ್ದರು. ಪ್ರಕರಣದಲ್ಲಿ ಸಂಸದರೊಬ್ಬರ ಹೆಸರು ಕೂಡ ಕೇಳಿಬಂದಿದ್ದು, ವಿವಿಧ ಪ್ರಕರಣಗಳಲ್ಲಿ ಅವರಿಗೆ ಒತ್ತಡ, ಬೆದರಿಕೆ ಮತ್ತು ಕಿರುಕುಳ ನೀಡಲಾಗುತ್ತಿತ್ತು ಎಂದು ಯುವತಿ ತನ್ನ ಪತ್ರದಲ್ಲಿ ವಿವರಿಸಿದ್ದಾರೆ.

ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಈ ಯುವತಿಯು, ಬಾಂಡ್ ಅವಧಿಯೊಂದನ್ನು ಪೂರ್ಣಗೊಳಿಸಲು ಬಾಕಿ ಇರುವಾಗ, ಸಂಸತ್ ಸದಸ್ಯರು ಮತ್ತು ಪೊಲೀಸ್ ಅಧಿಕಾರಿಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಅವರ ವಿರುದ್ಧ ನಾಲ್ಕು ಬಾರಿ ಅತ್ಯಾಚಾರದ ಆರೋಪಗಳಿವೆ. ಸರ್ಕಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳಲಾಗದಿರುವುದು ಘಟನೆಗೆ ಮತ್ತಷ್ಟು ಚರ್ಚೆ ನೀಡಿದ್ದಾರೆ.

ಈ ಪ್ರಕರಣ ಸತಾರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸಂಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಪಕ್ಷಗಳು ಪ್ರಕರಣವನ್ನು ತೀವ್ರವಾಗಿ ಪ್ರಶ್ನಿಸುತ್ತಿವೆ.

error: Content is protected !!