‘ಗೀತಾ ದಾನ ಯಜ್ಞ’ ಮೂಲಕ 1 ಲಕ್ಷ ಭಗವದ್ಗೀತೆ ಪ್ರತಿ ಹಂಚಲಿದೆ ಇಸ್ಕಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಡಿಸೆಂಬರ್ 3 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉದ್ಘಾಟಿಸಲಿರುವ ಒಂದು ತಿಂಗಳ ಅವಧಿಯ ‘ಗೀತಾದಾನ ಯಜ್ಞ’ದಲ್ಲಿ ಒಂದು ಲಕ್ಷ ಭಗವದ್ಗೀತೆ ಪ್ರತಿಗಳನ್ನು ವಿತರಿಸುವ ಗುರಿಯನ್ನು ಬೆಂಗಳೂರಿನ ಇಸ್ಕಾನ್ ದೇವಾಲಯಗಳ ಸಮೂಹ ಹೊಂದಿದೆ.
ಈ ಅವಧಿಯಲ್ಲಿ ಭಗವದ್ಗೀತೆ ಆಧಾರಿತ ವಿಚಾರ ಸಂಕಿರಣಗಳು ಮತ್ತು ತಾತ್ವಿಕ ಚರ್ಚೆಗಳನ್ನೂ ಆಯೋಜಿಸಲಾಗುವುದು ಎಂದು ಇಸ್ಕಾನ್ ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ. ವಸಂತಪುರದಲ್ಲಿರುವ ಇಸ್ಕಾನ್ (ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್) ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನದಲ್ಲಿ ‘ಗೀತಾ ಜಯಂತಿ’ಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ ಮತ್ತು ಕೆ. ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿರುವರು.
ದೇವಾಲಯದ ಸಂಕೀರ್ಣದಲ್ಲಿ ಮಕ್ಕಳು ಮತ್ತು ವಯಸ್ಕರ ವಿವಿಧ ಗುಂಪುಗಳು ಗೀತೆಯ 700 ಶ್ಲೋಕಗಳನ್ನು ಪಠಿಸುಲಿದೆ. ಖ್ಯಾತ ಭಕ್ತಿ ಗಾಯಕ ವಿದ್ಯಾಭೂಷಣ ಅವರ ಭಗವದ್ಗೀತೆ ಪಠಣದ ಮಲ್ಟಿಮೀಡಿಯಾ ವಿಡಿಯೋ ಪ್ರಸ್ತುತಿ ಜೊತೆಗೆ ಆರು ಭಾಷೆಗಳಲ್ಲಿ ಅನುವಾದವನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ತಿಳಿಸಿದೆ.
“ಭಗವದ್ಗೀತೆಯ ಸಂದೇಶವು ಅವರ ದೇಶ ಅಥವಾ ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಸಾರ್ವತ್ರಿಕವಾಗಿ ಅನ್ವಯಿಸುತ್ತದೆ ಮತ್ತು ಭಾರತ ಮತ್ತು ವಿದೇಶಗಳಲ್ಲಿನ ಮಹಾನ್ ವ್ಯಕ್ತಿಗಳಿಂದ ಹೆಚ್ಚು ಮೆಚ್ಚುಗೆ ಪಡೆದಿದೆ” ಎಂದು ಹೇಳಿಕೆ ತಿಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!